ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈದ್‌ ಅಲ್ ಅದಾ: ರಾಜಧಾನಿಯಲ್ಲಿ ಶ್ರದ್ಧಾ, ಭಕ್ತಿಯ ಬಕ್ರೀದ್ 

Last Updated 10 ಜುಲೈ 2022, 7:08 IST
ಅಕ್ಷರ ಗಾತ್ರ

ಬೆಂಗಳೂರು: ಮೋಡ ಕವಿದ ವಾತಾವರಣ, ಆಗಾಗ್ಗೆ‌ ಬೀಳುವ ತುಂತುರು ಮಳೆಯ ಮಧ್ಯೆ ನಗರದಲ್ಲಿ ಮುಸ್ಲಿಮರು‌ ಭಾನುವಾರ ಶ್ರದ್ಧೆ ಹಾಗೂ ಭಕ್ತಿಯಿಂದ ಬಕ್ರೀದ್ ಹಬ್ಬವನ್ನು ಆಚರಿಸಿದರು.

ರಾಜಧಾನಿಯ ವಿವಿಧ ಮಸೀದಿಗಳಿಗೆ ತೆರಳಿದ ಮುಸ್ಲಿಮರು, ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ದೃಶ್ಯ ಕಂಡುಬಂತು. ಪೋಷಕರೊಂದಿಗೆ ಮಕ್ಕಳೂ ಪ್ರಾರ್ಥನಾ ಮಂದಿರದತ್ತ ತೆರಳಿ ಪ್ರಾರ್ಥನೆಯಲ್ಲಿ ಭಾಗಿಯಾದರು.

ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಕಾರಣಕ್ಕೆ ಹಬ್ಬದ ಆಚರಣೆಗೆ ಕೆಲವು ನಿರ್ಬಂಧ ಹೇರಲಾಗಿತ್ತು. ಈ ಬಾರಿ ಯಾವುದೇ ಅಡೆತಡೆಯಿಲ್ಲದೇ ಬಕ್ರೀದ್ ಆಚರಿಸಲಾಗುತ್ತಿದೆ. ಮಸೀದಿಗಳ ಸುತ್ತಮುತ್ತ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT