ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷೆ ಎನ್.ಸಿ. ಜ್ಯೋತಿ, ‘ಮುಸ್ಲಿಮರು ಬಕ್ರೀದ್ ಸಂದರ್ಭದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಬಲಿದಾನ ಕಾರ್ಯಕ್ರಮ ನಡೆಸುತ್ತಾರೆ. 1,400 ವರ್ಷಗಳಿಂದಲೂ ಆಚರಿಸಿಕೊಂಡು ಬಂದಿರುವ ಇಂತಹ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸುವ ಪ್ರಯತ್ನಗಳು ಈಚೆಗೆ ನಡೆಯುತ್ತಿವೆ. ಮುಸಲ್ಮಾನರ ಬಕ್ರೀದ್ ಹಬ್ಬಕ್ಕೆ ಹಿಂದೂ ಸಂಘಟನೆಗಳು ಅಡಚಣೆ ಮಾಡುವುದಕ್ಕೆ ಅವಕಾಶ ನೀಡಬಾರದು’ ಎಂದರು.