<p><strong>ಬೆಂಗಳೂರು:</strong> ಬಾಲಗಂಗಾಧರನಾಥ ಮೇಲ್ಸೇತುವೆ ರಸ್ತೆಯ ಒಂದು ಪಾರ್ಶ್ವದಲ್ಲಿ ಶುಕ್ರವಾರ ಸಂಜೆಯಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಪಾಲಿಕೆ ಮುಂದಾಗಿದೆ.</p>.<p>‘ಮೇಲ್ಸೇತುವೆಯಲ್ಲಿ ಒಂದು ಪಾರ್ಶ್ವದ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಪುರಭವನ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಚಲಿಸುವ ವಾಹನಗಳು ಈ ಮೇಲ್ಸೇತುವೆ ಮೇಲೆ ಸಂಚರಿಸುವುದಕ್ಕೆ ಶುಕ್ರವಾರ ಸಂಜೆ ಬಳಿಕ ಅವಕಾಶ ಮಾಡಿಕೊಡುತ್ತೇವೆ’ ಎಂದು ಪಾಲಿಕೆ ಮುಖ್ಯ ಎಂಜಿನಿಯರ್ (ಯೋಜನೆ) ಕೆ.ಟಿ.ನಾಗರಾಜ್ ತಿಳಿಸಿದ್ದಾರೆ.</p>.<p>2018ರ ಡಿಸೆಂಬರ್ ಅಂತ್ಯದಲ್ಲಿ ಈ ಮೇಲ್ಸೇತುವೆಯ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಕಾಮಗಾರಿಯ ಸಂದರ್ಭದಲ್ಲಿ ಪುರಭವನದಿಂದ ಮೈಸೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಕೆ.ಆರ್. ಮಾರುಕಟ್ಟೆ ರಸ್ತೆ ಮೂಲಕ ಸಾಗುತ್ತಿದ್ದವು.</p>.<p>ಮೈಸೂರು ರಸ್ತೆ ಕಡೆಯಿಂದ ಪುರಭವನದ ಕಡೆಗಿನ ರಸ್ತೆಯ ಡಾಂಬರೀಕರಣ ನಡೆಯುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತಿದೆ. ಈ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಾಲಗಂಗಾಧರನಾಥ ಮೇಲ್ಸೇತುವೆ ರಸ್ತೆಯ ಒಂದು ಪಾರ್ಶ್ವದಲ್ಲಿ ಶುಕ್ರವಾರ ಸಂಜೆಯಿಂದ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಪಾಲಿಕೆ ಮುಂದಾಗಿದೆ.</p>.<p>‘ಮೇಲ್ಸೇತುವೆಯಲ್ಲಿ ಒಂದು ಪಾರ್ಶ್ವದ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಪುರಭವನ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಚಲಿಸುವ ವಾಹನಗಳು ಈ ಮೇಲ್ಸೇತುವೆ ಮೇಲೆ ಸಂಚರಿಸುವುದಕ್ಕೆ ಶುಕ್ರವಾರ ಸಂಜೆ ಬಳಿಕ ಅವಕಾಶ ಮಾಡಿಕೊಡುತ್ತೇವೆ’ ಎಂದು ಪಾಲಿಕೆ ಮುಖ್ಯ ಎಂಜಿನಿಯರ್ (ಯೋಜನೆ) ಕೆ.ಟಿ.ನಾಗರಾಜ್ ತಿಳಿಸಿದ್ದಾರೆ.</p>.<p>2018ರ ಡಿಸೆಂಬರ್ ಅಂತ್ಯದಲ್ಲಿ ಈ ಮೇಲ್ಸೇತುವೆಯ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಕಾಮಗಾರಿಯ ಸಂದರ್ಭದಲ್ಲಿ ಪುರಭವನದಿಂದ ಮೈಸೂರು ರಸ್ತೆ ಕಡೆಗೆ ಸಂಚರಿಸುವ ವಾಹನಗಳು ಕೆ.ಆರ್. ಮಾರುಕಟ್ಟೆ ರಸ್ತೆ ಮೂಲಕ ಸಾಗುತ್ತಿದ್ದವು.</p>.<p>ಮೈಸೂರು ರಸ್ತೆ ಕಡೆಯಿಂದ ಪುರಭವನದ ಕಡೆಗಿನ ರಸ್ತೆಯ ಡಾಂಬರೀಕರಣ ನಡೆಯುವುದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತಿದೆ. ಈ ಕಾಮಗಾರಿಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>