‘ಮೇಲ್ಸೇತುವೆಯಲ್ಲಿ ಒಂದು ಪಾರ್ಶ್ವದ ರಸ್ತೆಯ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದೆ. ಪುರಭವನ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಚಲಿಸುವ ವಾಹನಗಳು ಈ ಮೇಲ್ಸೇತುವೆ ಮೇಲೆ ಸಂಚರಿಸುವುದಕ್ಕೆ ಶುಕ್ರವಾರ ಸಂಜೆ ಬಳಿಕ ಅವಕಾಶ ಮಾಡಿಕೊಡುತ್ತೇವೆ’ ಎಂದು ಪಾಲಿಕೆ ಮುಖ್ಯ ಎಂಜಿನಿಯರ್ (ಯೋಜನೆ) ಕೆ.ಟಿ.ನಾಗರಾಜ್ ತಿಳಿಸಿದ್ದಾರೆ.