‘ರಾಜ್ಯದಲ್ಲಿ ಪ್ರಬಲ ಸಮುದಾಯಗಳಿಗೆ ಸರ್ಕಾರ ಎ,ಬಿ,ಸಿ,ಡಿ ಎಂಬ ಹೊಸ ಮೀಸಲಾತಿಯ ಸೌಲಭ್ಯವನ್ನು ಕಲ್ಪಿಸುತ್ತಿದೆ. ಆದರೆ, ನಮ್ಮಂತಹ ಧ್ವನಿಯಿಲ್ಲದ ಜಾತಿಗಳಿಗೆ ಸ್ಪಂದಿಸುತ್ತಿಲ್ಲ. ರಾಜ್ಯದಲ್ಲಿ ಬಲಿಜ ಸಮುದಾಯ 40 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಕೃಷಿ, ಕೂಲಿ, ಹೈನುಗಾರಿಕೆ, ಬಳೆ, ಹೂವು ಹಾಗೂ ಮಂಗಳದ್ರವ್ಯಗಳ ಮಾರಾಟ ಮಾಡಿಕೊಂಡು ಜೀವನ ನಿರ್ವಹಿಸುತ್ತಿದ್ದಾರೆ. ಈ ಸಮುದಾಯ 54 ವಿಧಾನಸಭೆ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ.’ ಎಂದರು.