‘28 ವರ್ಷಗಳಿಂದ ಈ ಸಮುದಾಯಕ್ಕೆ ದ್ರೋಹ ಎಸಗಲಾಗಿದೆ. ನ್ಯಾಯಮೂರ್ತಿ ಭಕ್ತವತ್ಸಲಂ ವರದಿ ಪ್ರಕಾರ ರಾಜ್ಯದಲ್ಲಿ ಸುಮಾರು 820 ಹಿಂದುಳಿದ ಜಾತಿಗಳಿದ್ದು, ಅವುಗಳ ಪೈಕಿ 156 ಜಾತಿಗಳಿಗೆ ಮಾತ್ರ ಮೀಸಲಾತಿ ದೊರಕಿದೆ. ಚಳಿಗಾಲ ಅಧಿವೇಶನದಲ್ಲಿ 2ಎ ಮೀಸಲಾತಿ ಸಿಗದಿದ್ದರೆ ಕೈವಾರದಿಂದ ಪಾದಯಾತ್ರೆ ಕೈಗೊಂಡು ವಿಧಾನಸೌಧ ಚಲೊ ನಡೆಸಲಾಗುವುದು’ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.