<p><strong>ಕೆ.ಆರ್.ಪುರ:</strong> ವರ್ತೂರಿನ ದಿ ಗ್ರೀನ್ ಸ್ಕೂಲ್– ಬೆಂಗಳೂರು (ಟಿಜಿಎಸ್– ಬಿ) ಶಾಲೆ ತನ್ನ ‘ಬ್ಯಾಂಬೂ 4 ಬೆಂಗಳೂರು’ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗಾಗಿ ಬಿದಿರಿನ ಬೈಸಿಕಲ್ಗಳನ್ನು ತಯಾರಿಸಿದೆ.</p>.<p>ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಬಿದಿರನ ಸೈಕಲ್ಗಳಲ್ಲಿ ಸಂಚರಿಸುವ ಮೂಲಕ ‘ಬ್ಯಾಂಬೂ 4 ಬೆಂಗಳೂರು’ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿದರು.</p>.<p>ಶಾಲಾ ಆವರಣದಲ್ಲಿ 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಬಿದಿರಿನ ಬೈಸಿಕಲ್ ಸವಾರಿ ಮಾಡಿದ ನಂತರ ಮಾತನಾಡಿದ ಈಶ್ವರ್ ಖಂಡ್ರೆ, ‘ಇದು ವಿದ್ಯಾರ್ಥಿಗಳನ್ನು ಪ್ರಕೃತಿಗೆ ಹತ್ತಿರವಾಗಿಸುವ ಉತ್ತಮ ಮಾರ್ಗ’ ಎಂದರು.</p>.<p>‘ಬಿದಿರು ಹೆಚ್ಚಿನ ಸಾಮರ್ಥ್ಯದ ಶಕ್ತಿ ಹೊಂದಿದೆ. ಬಿದಿರಿನ ಬೈಸಿಕಲ್ಗಳು 20ರಿಂದ 30 ವರ್ಷಗಳವರೆಗೆ ಬಾಳಿಕೆ ಬರುತ್ತವೆ. ಭಾರತದ ಪ್ರಥಮ ಜೀರೋ ಕಾರ್ಬನ್ ಶಾಲೆಯಾಗಿ, ನಾವು ಈ ಪರಿಸರಸ್ನೇಹಿ ಉಪಕ್ರಮವನ್ನು ಕೈಗೊಂಡಿದ್ದೇವೆ. ಬಿದಿರಿನ ಕಾರ್ಯಸಾಧ್ಯತೆಯನ್ನು ಅನ್ವೇಷಿಸಲು, ಬಿದಿರಿನಿಂದ ಮಾಡಿದ ಸುಮಾರು 6 ಸೈಕಲ್ಗಳನ್ನು ಸಿದ್ಧಪಡಿಸಿದ್ದೇವೆ’ ಎಂದು ಟಿಜಿಎಸ್– ಬಿ ಪ್ರಾಂಶುಪಾಲೆ ಉಷಾ ಅಯ್ಯರ್ ಮಾಹಿತಿ ನೀಡಿದರು.</p>.<p>ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಭಾರತೀಯ ಬಿದಿರು ಸೊಸೈಟಿ ಅಧ್ಯಕ್ಷ ಪುನಾಟಿ, ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾಶ್ ಚಂದ್ರ ರೇ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ವರ್ತೂರಿನ ದಿ ಗ್ರೀನ್ ಸ್ಕೂಲ್– ಬೆಂಗಳೂರು (ಟಿಜಿಎಸ್– ಬಿ) ಶಾಲೆ ತನ್ನ ‘ಬ್ಯಾಂಬೂ 4 ಬೆಂಗಳೂರು’ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗಾಗಿ ಬಿದಿರಿನ ಬೈಸಿಕಲ್ಗಳನ್ನು ತಯಾರಿಸಿದೆ.</p>.<p>ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರು ಬಿದಿರನ ಸೈಕಲ್ಗಳಲ್ಲಿ ಸಂಚರಿಸುವ ಮೂಲಕ ‘ಬ್ಯಾಂಬೂ 4 ಬೆಂಗಳೂರು’ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿದರು.</p>.<p>ಶಾಲಾ ಆವರಣದಲ್ಲಿ 8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳೊಂದಿಗೆ ಬಿದಿರಿನ ಬೈಸಿಕಲ್ ಸವಾರಿ ಮಾಡಿದ ನಂತರ ಮಾತನಾಡಿದ ಈಶ್ವರ್ ಖಂಡ್ರೆ, ‘ಇದು ವಿದ್ಯಾರ್ಥಿಗಳನ್ನು ಪ್ರಕೃತಿಗೆ ಹತ್ತಿರವಾಗಿಸುವ ಉತ್ತಮ ಮಾರ್ಗ’ ಎಂದರು.</p>.<p>‘ಬಿದಿರು ಹೆಚ್ಚಿನ ಸಾಮರ್ಥ್ಯದ ಶಕ್ತಿ ಹೊಂದಿದೆ. ಬಿದಿರಿನ ಬೈಸಿಕಲ್ಗಳು 20ರಿಂದ 30 ವರ್ಷಗಳವರೆಗೆ ಬಾಳಿಕೆ ಬರುತ್ತವೆ. ಭಾರತದ ಪ್ರಥಮ ಜೀರೋ ಕಾರ್ಬನ್ ಶಾಲೆಯಾಗಿ, ನಾವು ಈ ಪರಿಸರಸ್ನೇಹಿ ಉಪಕ್ರಮವನ್ನು ಕೈಗೊಂಡಿದ್ದೇವೆ. ಬಿದಿರಿನ ಕಾರ್ಯಸಾಧ್ಯತೆಯನ್ನು ಅನ್ವೇಷಿಸಲು, ಬಿದಿರಿನಿಂದ ಮಾಡಿದ ಸುಮಾರು 6 ಸೈಕಲ್ಗಳನ್ನು ಸಿದ್ಧಪಡಿಸಿದ್ದೇವೆ’ ಎಂದು ಟಿಜಿಎಸ್– ಬಿ ಪ್ರಾಂಶುಪಾಲೆ ಉಷಾ ಅಯ್ಯರ್ ಮಾಹಿತಿ ನೀಡಿದರು.</p>.<p>ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಭಾರತೀಯ ಬಿದಿರು ಸೊಸೈಟಿ ಅಧ್ಯಕ್ಷ ಪುನಾಟಿ, ಅರಣ್ಯ ಪಡೆ ಮುಖ್ಯಸ್ಥ ಬ್ರಿಜೇಶ್ ಕುಮಾರ್ ದೀಕ್ಷಿತ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಭಾಶ್ ಚಂದ್ರ ರೇ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>