<p>ರಾಜರಾಜೇಶ್ವರಿನಗರ: ‘ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಲಾಭದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಮುಂದಿನ ನಾಲ್ಕು ವರ್ಷದಲ್ಲಿ ರಾಷ್ಟ್ರದಲ್ಲಿಯೇ ಅಗ್ರಸ್ಥಾನಕ್ಕೆ ಏರಲಿದೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಹೇಳಿದರು.</p>.<p>ಸಂಘಗಳ ಸದಸ್ಯರು, ಸಿಬ್ಬಂದಿಗೆ ವಿಶೇಷ ಪ್ರೋತ್ಸಾಹಧನದ ಚೆಕ್ ಮತ್ತು ₹40 ಕೋಟಿ ಲಾಭವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮದಲ್ಲಿ ಅವರು ಬುಧವಾರ ಮಾತನಾಡಿದರು.</p>.<p>‘ನಾನು ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗ ನಷ್ಟದಲ್ಲಿದ್ದ ಸಂಸ್ಥೆ, ಈಗ ಲಾಭದಲ್ಲಿದೆ. ಮುಂದೆ ವಿದೇಶಿಯರೂ ನಂದಿನಿ ಉತ್ಪನ್ನಗಳನ್ನೇ ಖರೀದಿಸುವ ವಾತಾವರಣ ನಿರ್ಮಾಣಕ್ಕೆ ರೈತರು, ಸಿಬ್ಬಂದಿ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ‘ಹೈನುಗಾರಿಕೆಗೆ ಹಸು ಕೊಂಡುಕೊಳ್ಳಲು ಬಿಡಿಸಿಸಿ ಬ್ಯಾಂಕ್ ವತಿಯಿಂದ ತಲಾ ₹10 ಲಕ್ಷದಿಂದ ₹15 ಲಕ್ಷದವರೆಗೆ ಸಾಲ ನೀಡಲಾಗುತ್ತಿದೆ’ ಎಂದರು.</p>.<p>ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು, ಬಮೂಲ್ ನಿರ್ದೇಶಕರಾದ ಆರ್.ಕೆ.ರಮೇಶ್, ಬಿ.ಸಿ.ಆನಂದ ಕುಮಾರ್, ಉಪಾಧ್ಯಕ್ಷ ರಾಜಣ್ಣ, ಎಚ್.ಎಸ್. ಹರೀಶ್ ಕುಮಾರ್, ಕಡತನಮಲೆ ಸತೀಶ್, ಬಿಎಂಐಸಿಪಿ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕ ಕೆ.ರಾಜು, ಬಮೂಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಟಿ.ಸುರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜರಾಜೇಶ್ವರಿನಗರ: ‘ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಲಾಭದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದ್ದು, ಮುಂದಿನ ನಾಲ್ಕು ವರ್ಷದಲ್ಲಿ ರಾಷ್ಟ್ರದಲ್ಲಿಯೇ ಅಗ್ರಸ್ಥಾನಕ್ಕೆ ಏರಲಿದೆ’ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಅವರು ಹೇಳಿದರು.</p>.<p>ಸಂಘಗಳ ಸದಸ್ಯರು, ಸಿಬ್ಬಂದಿಗೆ ವಿಶೇಷ ಪ್ರೋತ್ಸಾಹಧನದ ಚೆಕ್ ಮತ್ತು ₹40 ಕೋಟಿ ಲಾಭವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮದಲ್ಲಿ ಅವರು ಬುಧವಾರ ಮಾತನಾಡಿದರು.</p>.<p>‘ನಾನು ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗ ನಷ್ಟದಲ್ಲಿದ್ದ ಸಂಸ್ಥೆ, ಈಗ ಲಾಭದಲ್ಲಿದೆ. ಮುಂದೆ ವಿದೇಶಿಯರೂ ನಂದಿನಿ ಉತ್ಪನ್ನಗಳನ್ನೇ ಖರೀದಿಸುವ ವಾತಾವರಣ ನಿರ್ಮಾಣಕ್ಕೆ ರೈತರು, ಸಿಬ್ಬಂದಿ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.</p>.<p>ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ‘ಹೈನುಗಾರಿಕೆಗೆ ಹಸು ಕೊಂಡುಕೊಳ್ಳಲು ಬಿಡಿಸಿಸಿ ಬ್ಯಾಂಕ್ ವತಿಯಿಂದ ತಲಾ ₹10 ಲಕ್ಷದಿಂದ ₹15 ಲಕ್ಷದವರೆಗೆ ಸಾಲ ನೀಡಲಾಗುತ್ತಿದೆ’ ಎಂದರು.</p>.<p>ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು, ಬಮೂಲ್ ನಿರ್ದೇಶಕರಾದ ಆರ್.ಕೆ.ರಮೇಶ್, ಬಿ.ಸಿ.ಆನಂದ ಕುಮಾರ್, ಉಪಾಧ್ಯಕ್ಷ ರಾಜಣ್ಣ, ಎಚ್.ಎಸ್. ಹರೀಶ್ ಕುಮಾರ್, ಕಡತನಮಲೆ ಸತೀಶ್, ಬಿಎಂಐಸಿಪಿ ಅಧ್ಯಕ್ಷ ರಘುನಂದನ್ ರಾಮಣ್ಣ, ಮಾಜಿ ಶಾಸಕ ಕೆ.ರಾಜು, ಬಮೂಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಟಿ.ಸುರೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>