ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಸಿಂಗನಾಯಕನಹಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ 1422ನೇ ಮದ್ಯವರ್ಜನ ಶಿಬಿರದ ಸಮಾರೋಪ ನಮಾರಂಭದಲ್ಲಿ ಮಾತನಾಡಿದ ಅವರು, ‘ಕೇವಲ ಕೆಲವು ರಾಜ್ಯಗಳಲ್ಲಿ ಮದ್ಯನಿಷೇಧ ಮಾಡಿದರೆ, ಪಕ್ಕದ ರಾಜ್ಯಗಳಿಂದ ಅಕ್ರಮವಾಗಿ ಮದ್ಯಸರಬರಾಜು ಮಾಡಿ ಕೊಂಡು ಜನರು ಹಾಳಾಗುತ್ತಾರೆ. ಈ ದಿಸೆಯಲ್ಲಿ ಇಡೀ ದೇಶದಲ್ಲಿ ಮದ್ಯ ನಿಷೇಧವಾಗಬೇಕು’ ಎಂದರು.