ಬೆಂಗಳೂರು: ಕೋವಿಡ್ 19 ಹಾಗೂ ಕಾಲರಾ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಹೋಟೆಲ್ಗಳಲ್ಲಿ, ಕಲ್ಯಾಣ ಮಂಟಪಗಳಲ್ಲಿ ಯಾವುದೇ ಸಾರ್ವಜನಿಕ ಸಭೆ ಸಮಾರಂಭಗಳನ್ನು ಹಮ್ಮಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂಬುದಾಗಿ ಶಿವಾಜಿನಗರ ವಲಯದ ಆರೋಗ್ಯ ಮತ್ತು ವೈದ್ಯಾಧಿಕಾರಿ ಶಿವೇಗೌಡ ಅವರು ಗುರುವಾರ ಬರೆದ ಪತ್ರ ಗೊಂದಲ ಸೃಷ್ಟಿಸಿದೆ.