‘ಕೆಲ ನಿಮಿಷಗಳ ನಂತರ ಸ್ಥಳಕ್ಕೆ ಬಂದಿದ್ದ ಆರೋಪಿಗಳು, ಕಾರಿಗೆ ಹಾಕಿದ್ದ ವ್ಹೀಲ್ ಕ್ಲ್ಯಾಂಪ್ ಗಮನಿಸಿದ್ದರು. ಪೊಲೀಸರಿಗೆ ಕರೆ ಮಾಡಿ ಸ್ಥಳಕ್ಕೆ ಕರೆಸಿಕೊಂಡಿದ್ದರು. ಉಮೇಶ್ ಹಾಗೂ ನಾರಾಯಣಸ್ವಾಮಿ, ವ್ಹೀಲ್ ಕ್ಲ್ಯಾಂಪ್ ತೆರೆಯುತ್ತಿದ್ದರು. ಅದೇ ಸಂದರ್ಭದಲ್ಲಿ ಆರೋಪಿಗಳು ಹಾಗೂ ಇಬ್ಬರು ಮಹಿಳೆಯರು, ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ‘ಪೊಲೀಸರಿಗೆ ಒಂದು ಗತಿ ಕಾಣಿಸಿ’ ಎಂದು ಮಹಿಳೆಯರು ಕೂಗಾಡಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.