<p><strong>ಬೆಂಗಳೂರು: </strong>ಬನಶಂಕರಿ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದ್ದ ಕಾರು–ಬೈಕ್ ನಡುವಿನ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಪಾನಮತ್ತನಾಗಿ ಕಾರು ಚಲಾಯಿಸಿದ್ದ ವ್ಯಕ್ತಿ ಪದ್ಮನಾಭನಗರ ನಿವಾಸಿ ಸುಹಾಸ್ ವೆಂಕಟೇಶ್ (26) ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.</p>.<p>‘ಸುಹಾಸ್ ಡಿಜೆ ಎಂದು ತಿಳಿದುಬಂದಿದೆ. ಬೈಕ್ ಸವಾರರಾದ ಬನಶಂಕರಿಯ ಕಾವೇರಿ ನಗರದಲ್ಲಿ ವಾಸವಿದ್ದ ರಾಜಸ್ಥಾನದ ಕೇತಾರಾಂ (40) ಹಾಗೂ ಕೀಮಾರಂ (20) ಮೃತಪಟ್ಟಿದ್ದರು’.</p>.<p>‘ಪಾರ್ಟಿಯಿಂದ ತನ್ನ ಸ್ನೇಹಿತೆ ಜೊತೆ ಮರಳುವಾಗ ಪಾನಮತ್ತನಾಗಿದ್ದ ಸುಹಾಸ್, ವೇಗವಾಗಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದಾನೆ. ಘಟನೆಯಲ್ಲಿ ಗಾಯಗೊಂಡಿರುವ ಸುಹಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಕ್ತದ ಮಾದರಿ ಪರೀಕ್ಷಿಸಿದಾಗ ಮದ್ಯದ ಅಮಲಿನಲ್ಲಿರುವುದು ದೃಢಪಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಚೇತರಿಸಿಕೊಂಡ ನಂತರಸುಹಾಸ್ನನ್ನು ಬಂಧಿಸಲಾಗುವುದು’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬನಶಂಕರಿ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದ್ದ ಕಾರು–ಬೈಕ್ ನಡುವಿನ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಪಾನಮತ್ತನಾಗಿ ಕಾರು ಚಲಾಯಿಸಿದ್ದ ವ್ಯಕ್ತಿ ಪದ್ಮನಾಭನಗರ ನಿವಾಸಿ ಸುಹಾಸ್ ವೆಂಕಟೇಶ್ (26) ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.</p>.<p>‘ಸುಹಾಸ್ ಡಿಜೆ ಎಂದು ತಿಳಿದುಬಂದಿದೆ. ಬೈಕ್ ಸವಾರರಾದ ಬನಶಂಕರಿಯ ಕಾವೇರಿ ನಗರದಲ್ಲಿ ವಾಸವಿದ್ದ ರಾಜಸ್ಥಾನದ ಕೇತಾರಾಂ (40) ಹಾಗೂ ಕೀಮಾರಂ (20) ಮೃತಪಟ್ಟಿದ್ದರು’.</p>.<p>‘ಪಾರ್ಟಿಯಿಂದ ತನ್ನ ಸ್ನೇಹಿತೆ ಜೊತೆ ಮರಳುವಾಗ ಪಾನಮತ್ತನಾಗಿದ್ದ ಸುಹಾಸ್, ವೇಗವಾಗಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣವಾಗಿದ್ದಾನೆ. ಘಟನೆಯಲ್ಲಿ ಗಾಯಗೊಂಡಿರುವ ಸುಹಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ರಕ್ತದ ಮಾದರಿ ಪರೀಕ್ಷಿಸಿದಾಗ ಮದ್ಯದ ಅಮಲಿನಲ್ಲಿರುವುದು ದೃಢಪಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಚೇತರಿಸಿಕೊಂಡ ನಂತರಸುಹಾಸ್ನನ್ನು ಬಂಧಿಸಲಾಗುವುದು’ ಎಂದೂ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>