<p><strong>ಬೆಂಗಳೂರು:</strong> ‘ಈ ವರ್ಷದ ಮಾರ್ಚ್ 27ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ 100ಕ್ಕಿಂತಲೂ ಹೆಚ್ಚು ಜೋಡಿಗಳು ಹಸೆಮಣೆ ಏರಲಿವೆ’ ಎಂದು ಬನಶಂಕರಿ ಸಾಮೂಹಿಕ ವಿವಾಹ ವೇದಿಕೆ ಅಧ್ಯಕ್ಷ ಎ.ಎಚ್.ಬಸವರಾಜು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ‘ಪ್ರತಿಬಾರಿಯಂತೆ ಈ ಸಲವೂ ಬನಶಂಕರಿ ದೇವಿಯ ಸನ್ನಿಧಾನದಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. 22 ವರ್ಷಗಳಿಂದ ಈ ಉಚಿತ ವಿವಾಹ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈವರೆಗೆ 1,231ಕ್ಕೂ ಹೆಚ್ಚು ಜೋಡಿ ವೈವಾಹಿಕ ಬದುಕಿಗೆ ಕಾಲಿಡಲು ವೇದಿಕೆಯು ನೆರವಾಗಿದೆ’ ಎಂದರು.</p>.<p>‘ಜಾತಿ, ಮತ, ಬೇಧವಿಲ್ಲದೆ ಎಲ್ಲಾ ವರ್ಗದ ಜನರೂ ಒಂದೇ ಮಂಟಪದಲ್ಲಿ ತಮ್ಮಿಷ್ಟದವರನ್ನು ವರಿಸಲಿದ್ದಾರೆ. ಸಮಾರಂಭದಲ್ಲಿ ಹಾಜರಿರುವ ಮಠಾಧೀಶರು ನವಜೋಡಿಗೆ ಶುಭ ಹಾರೈಸಲಿದ್ದಾರೆ. ಈ ಬಾರಿ ಕೇರಳ, ಗೋವಾ, ತಮಿಳುನಾಡು ಹಾಗೂ ಇತರ ರಾಜ್ಯಗಳ ಜೋಡಿಗಳೂ ಪಾಲ್ಗೊಳ್ಳಲಿದ್ದಾರೆ. ಹೋದ ವರ್ಷ 70ಕ್ಕಿಂತಲೂ ಹೆಚ್ಚು ಜೋಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಮಾರ್ಚ್ 27ರಂದು ಬೆಳಿಗ್ಗೆ 7.40ರಿಂದ 9.15ರವರೆಗಿನ ಮೇಷ ಲಗ್ನದಲ್ಲಿ ಸಾಮೂಹಿಕ ವಿವಾಹ ನಡೆಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಈ ವರ್ಷದ ಮಾರ್ಚ್ 27ರಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಈ ಬಾರಿ 100ಕ್ಕಿಂತಲೂ ಹೆಚ್ಚು ಜೋಡಿಗಳು ಹಸೆಮಣೆ ಏರಲಿವೆ’ ಎಂದು ಬನಶಂಕರಿ ಸಾಮೂಹಿಕ ವಿವಾಹ ವೇದಿಕೆ ಅಧ್ಯಕ್ಷ ಎ.ಎಚ್.ಬಸವರಾಜು ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ‘ಪ್ರತಿಬಾರಿಯಂತೆ ಈ ಸಲವೂ ಬನಶಂಕರಿ ದೇವಿಯ ಸನ್ನಿಧಾನದಲ್ಲಿ ವಿವಾಹ ಮಹೋತ್ಸವ ನಡೆಯಲಿದೆ. 22 ವರ್ಷಗಳಿಂದ ಈ ಉಚಿತ ವಿವಾಹ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಈವರೆಗೆ 1,231ಕ್ಕೂ ಹೆಚ್ಚು ಜೋಡಿ ವೈವಾಹಿಕ ಬದುಕಿಗೆ ಕಾಲಿಡಲು ವೇದಿಕೆಯು ನೆರವಾಗಿದೆ’ ಎಂದರು.</p>.<p>‘ಜಾತಿ, ಮತ, ಬೇಧವಿಲ್ಲದೆ ಎಲ್ಲಾ ವರ್ಗದ ಜನರೂ ಒಂದೇ ಮಂಟಪದಲ್ಲಿ ತಮ್ಮಿಷ್ಟದವರನ್ನು ವರಿಸಲಿದ್ದಾರೆ. ಸಮಾರಂಭದಲ್ಲಿ ಹಾಜರಿರುವ ಮಠಾಧೀಶರು ನವಜೋಡಿಗೆ ಶುಭ ಹಾರೈಸಲಿದ್ದಾರೆ. ಈ ಬಾರಿ ಕೇರಳ, ಗೋವಾ, ತಮಿಳುನಾಡು ಹಾಗೂ ಇತರ ರಾಜ್ಯಗಳ ಜೋಡಿಗಳೂ ಪಾಲ್ಗೊಳ್ಳಲಿದ್ದಾರೆ. ಹೋದ ವರ್ಷ 70ಕ್ಕಿಂತಲೂ ಹೆಚ್ಚು ಜೋಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು. ಮಾರ್ಚ್ 27ರಂದು ಬೆಳಿಗ್ಗೆ 7.40ರಿಂದ 9.15ರವರೆಗಿನ ಮೇಷ ಲಗ್ನದಲ್ಲಿ ಸಾಮೂಹಿಕ ವಿವಾಹ ನಡೆಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>