<p><strong>ಬೆಂಗಳೂರು:</strong> ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ಮುಖ್ಯರಸ್ತೆಯಲ್ಲಿರುವ ಬನಶಂಕರಿ ಅಮ್ಮನವರ ಬ್ರಹ್ಮ ರಥೋತ್ಸವವು ಜ.3ರಂದು ನಡೆಯಲಿದ್ದು, ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ದಕ್ಷಿಣ ವಿಭಾಗದ ಡಿಸಿಪಿ ತಿಳಿಸಿದ್ದಾರೆ.</p>.<p><strong>ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ:</strong> ಕನಕಪುರ ಮುಖ್ಯರಸ್ತೆ ಬನಶಂಕರಿ ದೇವಸ್ಥಾನದಿಂದ ಸಾರಕ್ಕಿ ಮಾರುಕಟ್ಟೆ ಜಂಕ್ಷನ್ ವರೆಗೆ. </p> <p><strong>ನಿರ್ಬಂಧಿಸಲಾದ ಸಂಚಾರಕ್ಕೆ ಬದಲಿ ಮಾರ್ಗಗಳು: </strong>ಕನಕಪುರ ಮುಖ್ಯರಸ್ತೆ ಕೋಣನಕುಂಟೆ ಕಡೆಯಿಂದ ಬನಶಂಕರಿ ಬಸ್ ನಿಲ್ದಾಣದ ಕಡೆಗೆ ಹೋಗುವ ವಾಹನಗಳು ಜೆ.ಪಿ.ನಗರ ಮೆಟ್ರೊ ಜಂಕ್ಷನ್ (ಸಾರಕ್ಕಿ ಸಿಗ್ನಲ್) ಹತ್ತಿರ ಬಲ ತಿರುವು ಪಡೆದು ಸಿಂಧೂರ ವೃತ್ತದ ಮೂಲಕ ರಾಜಲಕ್ಷ್ಮಿ ಮಾರ್ಗವಾಗಿ ಸಂಚರಿಸಬಹುದು.</p>.<p>ಬನಶಂಕರಿ ಬಸ್ ನಿಲ್ದಾಣದ ಕಡೆಯಿಂದ ಸಾರಕ್ಕಿ ಸಿಗ್ನಲ್ ಕಡೆ ಸಂಚರಿಸುವ ವಾಹನಗಳು ಬನಶಂಕರಿ ಬಸ್ ನಿಲ್ದಾಣದ ಹತ್ತಿರ ಬಲಕ್ಕೆ ತಿರುವು ಪಡೆದು ಯಾರಬ್ ನಗರದ ಮೂಲಕ ಕೆ.ಎಸ್.ಲೇಔಟ್ ಜಂಕ್ಷನ್ನಲ್ಲಿ ಎಡಕ್ಕೆ ತಿರುವು ಪಡೆದು ಇಲಿಯಾಸ್ ನಗರ-ಸಾರಕ್ಕಿ ತಲುಪಿ ಅಲ್ಲಿಂದ ಬೇರೆಡೆಗೆ ತೆರಳಬಹುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕುಮಾರಸ್ವಾಮಿ ಲೇಔಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ಮುಖ್ಯರಸ್ತೆಯಲ್ಲಿರುವ ಬನಶಂಕರಿ ಅಮ್ಮನವರ ಬ್ರಹ್ಮ ರಥೋತ್ಸವವು ಜ.3ರಂದು ನಡೆಯಲಿದ್ದು, ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ದಕ್ಷಿಣ ವಿಭಾಗದ ಡಿಸಿಪಿ ತಿಳಿಸಿದ್ದಾರೆ.</p>.<p><strong>ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ:</strong> ಕನಕಪುರ ಮುಖ್ಯರಸ್ತೆ ಬನಶಂಕರಿ ದೇವಸ್ಥಾನದಿಂದ ಸಾರಕ್ಕಿ ಮಾರುಕಟ್ಟೆ ಜಂಕ್ಷನ್ ವರೆಗೆ. </p> <p><strong>ನಿರ್ಬಂಧಿಸಲಾದ ಸಂಚಾರಕ್ಕೆ ಬದಲಿ ಮಾರ್ಗಗಳು: </strong>ಕನಕಪುರ ಮುಖ್ಯರಸ್ತೆ ಕೋಣನಕುಂಟೆ ಕಡೆಯಿಂದ ಬನಶಂಕರಿ ಬಸ್ ನಿಲ್ದಾಣದ ಕಡೆಗೆ ಹೋಗುವ ವಾಹನಗಳು ಜೆ.ಪಿ.ನಗರ ಮೆಟ್ರೊ ಜಂಕ್ಷನ್ (ಸಾರಕ್ಕಿ ಸಿಗ್ನಲ್) ಹತ್ತಿರ ಬಲ ತಿರುವು ಪಡೆದು ಸಿಂಧೂರ ವೃತ್ತದ ಮೂಲಕ ರಾಜಲಕ್ಷ್ಮಿ ಮಾರ್ಗವಾಗಿ ಸಂಚರಿಸಬಹುದು.</p>.<p>ಬನಶಂಕರಿ ಬಸ್ ನಿಲ್ದಾಣದ ಕಡೆಯಿಂದ ಸಾರಕ್ಕಿ ಸಿಗ್ನಲ್ ಕಡೆ ಸಂಚರಿಸುವ ವಾಹನಗಳು ಬನಶಂಕರಿ ಬಸ್ ನಿಲ್ದಾಣದ ಹತ್ತಿರ ಬಲಕ್ಕೆ ತಿರುವು ಪಡೆದು ಯಾರಬ್ ನಗರದ ಮೂಲಕ ಕೆ.ಎಸ್.ಲೇಔಟ್ ಜಂಕ್ಷನ್ನಲ್ಲಿ ಎಡಕ್ಕೆ ತಿರುವು ಪಡೆದು ಇಲಿಯಾಸ್ ನಗರ-ಸಾರಕ್ಕಿ ತಲುಪಿ ಅಲ್ಲಿಂದ ಬೇರೆಡೆಗೆ ತೆರಳಬಹುದು ಎಂದು ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>