<p><strong>ಬೆಂಗಳೂರು</strong>: ‘ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡನೀಯ. ಭಯೋತ್ಪಾದಕರು ಧರ್ಮದ ಹೆಸರನ್ನು ಬಳಸಿಕೊಳ್ಳುತ್ತಾರೆಯೇ ಹೊರತು, ಅವರಿಗೆ ಧರ್ಮ ಮತ್ತು ಮಾನವೀಯತೆ ಎರಡೂ ಇಲ್ಲ’ ಎಂದು ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆ ತಿಳಿಸಿದೆ. </p>.<p>‘ಪ್ರವಾಸಿಗರ ಮೇಲೆ ಗುಂಡು ಹಾರಿಸಿ, ಹತ್ಯೆಗೈದ ಕೃತ್ಯ ಅಮಾನವೀಯ. ದೇಶದಲ್ಲಿ ಭಯೋತ್ಪಾದನೆ ನಿರ್ಮೂಲನವಾಗಿಲ್ಲ ಎಂಬುದಕ್ಕೆ ಇದು ಸಾಕ್ಷಿ. ಅಮಾಯಕ ಜನರನ್ನು ಹತ್ಯೆ ಮಾಡಿದ ತಂಡವನ್ನು ಕ್ಷಮಿಸಲಾಗದು. ಈ ವೇಳೆ ಜನರಿಗೆ ಭದ್ರತೆಯ ಭರವಸೆ ಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಸಂಘಟನೆಯ ಪರವಾಗಿ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ. </p>.<p>‘ಭಯೋತ್ಪಾದಕರ ಹೀನ ಕೃತ್ಯಕ್ಕೆ ಜೀವತೆತ್ತ ಎಲ್ಲ ಕುಟುಂಬದವರ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ. ಕಾಶ್ಮೀರದಲ್ಲಿ ನಡೆದ ಈ ಅಮಾನವೀಯ ಕೃತ್ಯದ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಜಾತಿ, ಧರ್ಮವನ್ನು ಮೀರಿ, ಸಂತ್ರಸ್ತರ ನೆರವಿಗೆ ಬಂದದ್ದು ಮಾನವೀಯ ನಡೆಯಾಗಿದೆ. ಮಾನವೀಯ ಸಮಾಜವೇ ನಮ್ಮ ಆದ್ಯತೆಯಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿ ಖಂಡನೀಯ. ಭಯೋತ್ಪಾದಕರು ಧರ್ಮದ ಹೆಸರನ್ನು ಬಳಸಿಕೊಳ್ಳುತ್ತಾರೆಯೇ ಹೊರತು, ಅವರಿಗೆ ಧರ್ಮ ಮತ್ತು ಮಾನವೀಯತೆ ಎರಡೂ ಇಲ್ಲ’ ಎಂದು ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆ ತಿಳಿಸಿದೆ. </p>.<p>‘ಪ್ರವಾಸಿಗರ ಮೇಲೆ ಗುಂಡು ಹಾರಿಸಿ, ಹತ್ಯೆಗೈದ ಕೃತ್ಯ ಅಮಾನವೀಯ. ದೇಶದಲ್ಲಿ ಭಯೋತ್ಪಾದನೆ ನಿರ್ಮೂಲನವಾಗಿಲ್ಲ ಎಂಬುದಕ್ಕೆ ಇದು ಸಾಕ್ಷಿ. ಅಮಾಯಕ ಜನರನ್ನು ಹತ್ಯೆ ಮಾಡಿದ ತಂಡವನ್ನು ಕ್ಷಮಿಸಲಾಗದು. ಈ ವೇಳೆ ಜನರಿಗೆ ಭದ್ರತೆಯ ಭರವಸೆ ಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ಸಂಘಟನೆಯ ಪರವಾಗಿ ಸಾಹಿತಿ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ. </p>.<p>‘ಭಯೋತ್ಪಾದಕರ ಹೀನ ಕೃತ್ಯಕ್ಕೆ ಜೀವತೆತ್ತ ಎಲ್ಲ ಕುಟುಂಬದವರ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ. ಕಾಶ್ಮೀರದಲ್ಲಿ ನಡೆದ ಈ ಅಮಾನವೀಯ ಕೃತ್ಯದ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರು ಜಾತಿ, ಧರ್ಮವನ್ನು ಮೀರಿ, ಸಂತ್ರಸ್ತರ ನೆರವಿಗೆ ಬಂದದ್ದು ಮಾನವೀಯ ನಡೆಯಾಗಿದೆ. ಮಾನವೀಯ ಸಮಾಜವೇ ನಮ್ಮ ಆದ್ಯತೆಯಾಗಿದೆ’ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>