<p><strong>ಬೊಮ್ಮನಹಳ್ಳಿ:</strong> ಸಮೀಪದ ಬಂಡೇಪಾಳ್ಯದಲ್ಲಿ ಅಪಾರ್ಟ್ಮೆಂಟ್ ಮತ್ತು ಮನೆಗಳ ಒಳಚರಂಡಿ ನೀರನ್ನು ನೇರವಾಗಿ ರಾಜಕಾಲುವೆಗೆ ಹರಿಸಲಾಗುತ್ತಿದೆ. ಇದರಿಂದ ದುರ್ವಾಸವನೆ ಹೆಚ್ಚಾಗಿದ್ದು, ರೋಗ ಹರಡುವ ಭೀತಿಯೂ ಎದುರಾಗಿದೆ ಎಂದು ನಿವಾಸಿಗಳು ದೂರಿದ್ದಾರೆ.</p>.<p>‘ರಾಜಕಾಲುವೆಯನ್ನು ‘ಎಲ್’ ಆಕಾರದಲ್ಲಿ ರೂಪಿಸಲಾಗಿದ್ದು, ಅಲ್ಲಲ್ಲಿ ಒತ್ತುವರಿ ಮಾಡಲಾಗಿದೆ. ಜತೆಗೆ ಇಲ್ಲಿ ಹೂಳು ತೆಗೆದಿಲ್ಲ. ಹೀಗಾಗಿ ನೀರು ನಿಂತಲ್ಲೇ ನಿಂತು ಗಬ್ಬು ವಾಸನೆ ಬೀರುತ್ತಿದೆ. ಈ ಬಗ್ಗೆ ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕೈಗೊಳ್ಳುತ್ತಿಲ್ಲʼ ಎಂದು ಬಂಡೇಪಾಳ್ಯದ ಗೃಹಿಣಿ ವರಲಕ್ಷ್ಮಿ ಹೇಳಿದರು.</p>.<p>‘ರಾಜಕಾಲುವೆ ಮೂಲಕ ಹರಿದು ಬರುವ ನೀರು ಬಂಡೇಪಾಳ್ಯಕ್ಕೆ ಹೊಂದಿಕೊಂಡಿರುವ ಗಾರ್ವೆಬಾವಿಪಾಳ್ಯ ಕೆರೆಯನ್ನು ಸೇರುತ್ತಿದೆ. ಸೊಳ್ಳೆ ಹಾವಳಿ ಹೆಚ್ಚಾಗಿದ್ದು, ಮಕ್ಕಳು ವಾಂತಿಬೇದಿ, ಜ್ವರದಿಂದ ಬಳಲುತ್ತಿದ್ದಾರೆʼ ಎಂದು ರಾಮಚಂದ್ರ ಆತಂಕ ವ್ಯಕ್ತಪಡಿಸಿದರು.</p>.<p>‘ಕೃಷ್ಣಾರೆಡ್ಡಿ ಬಡಾವಣೆ ಅನಧಿಕೃತ ಬಡಾವಣೆಯಾಗಿದ್ದು, ಇಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ. ಲೇಔಟ್ ನಿರ್ಮಾಣದ ವೇಳೆ ಒಳಚರಂಡಿ ನಿರ್ಮಾಣ ಮಾಡಿಲ್ಲ. ಇದಕ್ಕಾಗಿ ಜಾಗವನ್ನೂ ಬಿಟ್ಟಿಲ್ಲ, ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಲು ನಿರ್ಧರಿಸಿದ್ದೇವೆ’ ಎಂದು ಜಲಮಂಡಳಿ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಹೇಳಿದರು.</p>.<div><blockquote>ಇಲ್ಲಿನ ನಿವಾಸಿಗಳು ದೂರು ನೀಡಿದ್ದಾರೆ ಈ ವಿಷಯವನ್ನು ಜಲಮಂಡಳಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ</blockquote><span class="attribution">ಶ್ರೀಲಕ್ಷ್ಮಿ ಬಿಬಿಎಂಪಿ ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೊಮ್ಮನಹಳ್ಳಿ:</strong> ಸಮೀಪದ ಬಂಡೇಪಾಳ್ಯದಲ್ಲಿ ಅಪಾರ್ಟ್ಮೆಂಟ್ ಮತ್ತು ಮನೆಗಳ ಒಳಚರಂಡಿ ನೀರನ್ನು ನೇರವಾಗಿ ರಾಜಕಾಲುವೆಗೆ ಹರಿಸಲಾಗುತ್ತಿದೆ. ಇದರಿಂದ ದುರ್ವಾಸವನೆ ಹೆಚ್ಚಾಗಿದ್ದು, ರೋಗ ಹರಡುವ ಭೀತಿಯೂ ಎದುರಾಗಿದೆ ಎಂದು ನಿವಾಸಿಗಳು ದೂರಿದ್ದಾರೆ.</p>.<p>‘ರಾಜಕಾಲುವೆಯನ್ನು ‘ಎಲ್’ ಆಕಾರದಲ್ಲಿ ರೂಪಿಸಲಾಗಿದ್ದು, ಅಲ್ಲಲ್ಲಿ ಒತ್ತುವರಿ ಮಾಡಲಾಗಿದೆ. ಜತೆಗೆ ಇಲ್ಲಿ ಹೂಳು ತೆಗೆದಿಲ್ಲ. ಹೀಗಾಗಿ ನೀರು ನಿಂತಲ್ಲೇ ನಿಂತು ಗಬ್ಬು ವಾಸನೆ ಬೀರುತ್ತಿದೆ. ಈ ಬಗ್ಗೆ ಬಿಬಿಎಂಪಿ ಮತ್ತು ಜಲಮಂಡಳಿ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕೈಗೊಳ್ಳುತ್ತಿಲ್ಲʼ ಎಂದು ಬಂಡೇಪಾಳ್ಯದ ಗೃಹಿಣಿ ವರಲಕ್ಷ್ಮಿ ಹೇಳಿದರು.</p>.<p>‘ರಾಜಕಾಲುವೆ ಮೂಲಕ ಹರಿದು ಬರುವ ನೀರು ಬಂಡೇಪಾಳ್ಯಕ್ಕೆ ಹೊಂದಿಕೊಂಡಿರುವ ಗಾರ್ವೆಬಾವಿಪಾಳ್ಯ ಕೆರೆಯನ್ನು ಸೇರುತ್ತಿದೆ. ಸೊಳ್ಳೆ ಹಾವಳಿ ಹೆಚ್ಚಾಗಿದ್ದು, ಮಕ್ಕಳು ವಾಂತಿಬೇದಿ, ಜ್ವರದಿಂದ ಬಳಲುತ್ತಿದ್ದಾರೆʼ ಎಂದು ರಾಮಚಂದ್ರ ಆತಂಕ ವ್ಯಕ್ತಪಡಿಸಿದರು.</p>.<p>‘ಕೃಷ್ಣಾರೆಡ್ಡಿ ಬಡಾವಣೆ ಅನಧಿಕೃತ ಬಡಾವಣೆಯಾಗಿದ್ದು, ಇಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ. ಲೇಔಟ್ ನಿರ್ಮಾಣದ ವೇಳೆ ಒಳಚರಂಡಿ ನಿರ್ಮಾಣ ಮಾಡಿಲ್ಲ. ಇದಕ್ಕಾಗಿ ಜಾಗವನ್ನೂ ಬಿಟ್ಟಿಲ್ಲ, ಈ ಬಗ್ಗೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಲು ನಿರ್ಧರಿಸಿದ್ದೇವೆ’ ಎಂದು ಜಲಮಂಡಳಿ ಕಾರ್ಯಪಾಲಕ ಎಂಜಿನಿಯರ್ ರಮೇಶ್ ಹೇಳಿದರು.</p>.<div><blockquote>ಇಲ್ಲಿನ ನಿವಾಸಿಗಳು ದೂರು ನೀಡಿದ್ದಾರೆ ಈ ವಿಷಯವನ್ನು ಜಲಮಂಡಳಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಅವರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ</blockquote><span class="attribution">ಶ್ರೀಲಕ್ಷ್ಮಿ ಬಿಬಿಎಂಪಿ ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್ </span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>