<p><strong>ರಾಜರಾಜೇಶ್ವರಿ ನಗರ:</strong> ಬಂಡೇಮಠದ ಶ್ರೀ ಬಂಡೇಶ್ವರಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೀಪೋತ್ಸವ, ತೆಪ್ಪೋತ್ಸವ ಸಂಭ್ರಮದಿಂದ ನಡೆಯಿತು.</p>.<p>ಬೆಳಿಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ದೇವಸ್ಥಾನದ ಆವರಣದಲ್ಲಿ ವಿವಿಧ ರೀತಿಯ ಕಡಲೇಕಾಯಿ ಮಾರಾಟ ಜೋರಾಗಿತ್ತು. </p>.<p>ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ಸಾಗಿ ಬಂದು ದೇವರ ದರ್ಶನ ಪಡೆದರು. ಬೆಳಿಗ್ಗೆಯಿಂದಲೇ ಭಕ್ತಾಧಿಗಳಿಗೆ ಶ್ರೀಮಠದ ವತಿಯಿಂದ ಅನ್ನಪ್ರಸಾದವನ್ನು ಏರ್ಪಡಿಸಲಾಗಿತ್ತು. </p>.<p>ಕೋಟೆ ಯುವಕರ ಸಂಘ, ಜನಾಭಿಮಾನ ಮಹಿಳಾ ವೇದಿಕೆ, ದೇವಸ್ಥಾನದ ಭಕ್ತ ಮಂಡಳಿಯವರು ಭಾಗವಹಿಸಿ ಮುಂಜಾನೆಯಿಂದ ತಡರಾತ್ರಿಯವರೆಗೂ ಭಕ್ತಾದಿಗಳಿಗೆ ಅನ್ನಪ್ರಸಾದವನ್ನು ವಿತರಿಸಿದರು. </p>.<p>ಕೋಟೆ ಸೋಮೆಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮೇಶ್ವರಸ್ವಾಮಿಗೆ ರುದ್ರಾಭಿಷೇಕ ಸಹಿತ ವಿವಿಧ ಪೂಜಾ ಕೈಂಕರ್ಯ ನಡೆದವು. </p>.<p>ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಬಂಡೇಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ, ‘ಹಬ್ಬ ಹರಿದಿನಗಳು, ಕಾರ್ತಿಕಮಾಸ, ಶಿವರಾತ್ರಿಯಂದು ಸಾವಿರಾರು ಭಕ್ತರು ಬಂದು ಇಲ್ಲಿ ದೇವರ ದರ್ಶನ ಪಡೆಯುತ್ತಾರೆ. ಕಾರ್ತಿಕ ಮಾಸವು ಕತ್ತಲು, ಕಷ್ಟಗಳನ್ನು ತೊಲಗಿಸುವ ದೀಪಗಳ ರೂಪವೂ ಹೌದು’ ಎಂದರು.</p>.<p>ಶಾಸಕ ಎಸ್.ಟಿ.ಸೋಮಶೇಖರ್, ಕೆಆರ್ಐಡಿಎಲ್ ಮಾಜಿ ಅಧ್ಯಕ್ಷ ಎಂ. ರುದ್ರೇಶ್, ದೇವಸ್ಥಾನ ಟ್ರಸ್ಟಿ ಕೆ.ಎಸ್.ಜಗದೀಶ್, ಪಾಲಿಕೆ ಮಾಜಿ ಸದಸ್ಯರಾದ ಆಂಜನಪ್ಪ, ಶಾರದಾ ಮುನಿರಾಜು, ಸೂಲಿಕೆರೆ ಎಸ್.ಆರ್.ಮೋಹನ್, ಕಾಂಗ್ರೆಸ್ ಮುಖಂಡ ಆರ್.ಶಿವಮಾದಯ್ಯ ಬಿಜೆಪಿ ಮುಖಂಡ ಜೆ.ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿ ನಗರ:</strong> ಬಂಡೇಮಠದ ಶ್ರೀ ಬಂಡೇಶ್ವರಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ದೀಪೋತ್ಸವ, ತೆಪ್ಪೋತ್ಸವ ಸಂಭ್ರಮದಿಂದ ನಡೆಯಿತು.</p>.<p>ಬೆಳಿಗ್ಗೆಯಿಂದಲೇ ವಿವಿಧ ಪೂಜಾ ಕೈಂಕರ್ಯಗಳು ನೆರವೇರಿದವು. ದೇವಸ್ಥಾನದ ಆವರಣದಲ್ಲಿ ವಿವಿಧ ರೀತಿಯ ಕಡಲೇಕಾಯಿ ಮಾರಾಟ ಜೋರಾಗಿತ್ತು. </p>.<p>ಸಾವಿರಾರು ಭಕ್ತಾದಿಗಳು ಸರತಿ ಸಾಲಿನಲ್ಲಿ ಸಾಗಿ ಬಂದು ದೇವರ ದರ್ಶನ ಪಡೆದರು. ಬೆಳಿಗ್ಗೆಯಿಂದಲೇ ಭಕ್ತಾಧಿಗಳಿಗೆ ಶ್ರೀಮಠದ ವತಿಯಿಂದ ಅನ್ನಪ್ರಸಾದವನ್ನು ಏರ್ಪಡಿಸಲಾಗಿತ್ತು. </p>.<p>ಕೋಟೆ ಯುವಕರ ಸಂಘ, ಜನಾಭಿಮಾನ ಮಹಿಳಾ ವೇದಿಕೆ, ದೇವಸ್ಥಾನದ ಭಕ್ತ ಮಂಡಳಿಯವರು ಭಾಗವಹಿಸಿ ಮುಂಜಾನೆಯಿಂದ ತಡರಾತ್ರಿಯವರೆಗೂ ಭಕ್ತಾದಿಗಳಿಗೆ ಅನ್ನಪ್ರಸಾದವನ್ನು ವಿತರಿಸಿದರು. </p>.<p>ಕೋಟೆ ಸೋಮೆಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮೇಶ್ವರಸ್ವಾಮಿಗೆ ರುದ್ರಾಭಿಷೇಕ ಸಹಿತ ವಿವಿಧ ಪೂಜಾ ಕೈಂಕರ್ಯ ನಡೆದವು. </p>.<p>ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಬಂಡೇಮಠದ ಶ್ರೀ ಸಚ್ಚಿದಾನಂದ ಸ್ವಾಮೀಜಿ, ‘ಹಬ್ಬ ಹರಿದಿನಗಳು, ಕಾರ್ತಿಕಮಾಸ, ಶಿವರಾತ್ರಿಯಂದು ಸಾವಿರಾರು ಭಕ್ತರು ಬಂದು ಇಲ್ಲಿ ದೇವರ ದರ್ಶನ ಪಡೆಯುತ್ತಾರೆ. ಕಾರ್ತಿಕ ಮಾಸವು ಕತ್ತಲು, ಕಷ್ಟಗಳನ್ನು ತೊಲಗಿಸುವ ದೀಪಗಳ ರೂಪವೂ ಹೌದು’ ಎಂದರು.</p>.<p>ಶಾಸಕ ಎಸ್.ಟಿ.ಸೋಮಶೇಖರ್, ಕೆಆರ್ಐಡಿಎಲ್ ಮಾಜಿ ಅಧ್ಯಕ್ಷ ಎಂ. ರುದ್ರೇಶ್, ದೇವಸ್ಥಾನ ಟ್ರಸ್ಟಿ ಕೆ.ಎಸ್.ಜಗದೀಶ್, ಪಾಲಿಕೆ ಮಾಜಿ ಸದಸ್ಯರಾದ ಆಂಜನಪ್ಪ, ಶಾರದಾ ಮುನಿರಾಜು, ಸೂಲಿಕೆರೆ ಎಸ್.ಆರ್.ಮೋಹನ್, ಕಾಂಗ್ರೆಸ್ ಮುಖಂಡ ಆರ್.ಶಿವಮಾದಯ್ಯ ಬಿಜೆಪಿ ಮುಖಂಡ ಜೆ.ರಮೇಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>