ಬಂದ್ ನಷ್ಟ: ಕಮಿಷನರ್ ನೇಮಕ

ಬೆಂಗಳೂರು: ’ಮಹದಾಯಿ ನ್ಯಾಯಮಂಡಳಿ ತೀರ್ಪು ವಿರೋಧಿಸಿ 2018ರಲ್ಲಿ ನಡೆದ ಬಂದ್ ಹಾಗೂ ಜಾರಿ ನಿರ್ದೇಶನಾಲಯದಿಂದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಬಂಧನವಾಗಿದ್ದ ವೇಳೆ ಅದನ್ನು ಖಂಡಿಸಿ 2019ರಲ್ಲಿ ನಡೆದ ಪ್ರತ್ಯೇಕ ಬಂದ್ಗಳ ಸಂದರ್ಭದಲ್ಲಿ ಉಂಟಾದ ಆಸ್ತಿಪಾಸ್ತಿ ನಷ್ಟದ ಅಂದಾಜು ಮಾಡಲು ಕ್ಲೇಮ್ ಕಮಿಷನರ್ಗಳನ್ನು ನೇಮಕ ಮಾಡಲಾಗಿದೆ‘ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
'ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಬಂದ್ ಮತ್ತು ಪ್ರತಿಭಟನೆಯಿಂದ ಉಂಟಾದ ನಷ್ಟವನ್ನು ಅಂದಾಜಿಸಲು ನೇಮಿಸಿರುವ ಕ್ಲೇಮ್ ಕಮಿಷನರ್ ರಾಮನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಚೇರಿ ಹಾಗೂ ಮೂಲಸೌಕರ್ಯ ಒದಗಿಸಲಾಗಿದೆ. ಮತ್ತೊಂದು ಬಂದ್ಗೆ ಸಂಬಂಧಿಸಿದಂತೆಯೂ ಕ್ಲೇಮ್ ಕಮಿಷನರ್ ನೇಮಕ ಮಾಡಲಾಗಿದೆ. ಇವರೆಡರ ಪ್ರಗತಿ ವರದಿ ಸಲ್ಲಿಸಲು ಕಾಲಾವಕಾಶ ಬೇಕು' ಎಂದು ಸರ್ಕಾರಿ ವಕೀಲರು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ’ಈ ಬಗ್ಗೆ ವರದಿ ಸಲ್ಲಿಸಿ' ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.