'ಡಿ.ಕೆ. ಶಿವಕುಮಾರ್ ಬಂಧನ ವಿರೋಧಿಸಿ ನಡೆದ ಬಂದ್ ಮತ್ತು ಪ್ರತಿಭಟನೆಯಿಂದ ಉಂಟಾದ ನಷ್ಟವನ್ನು ಅಂದಾಜಿಸಲು ನೇಮಿಸಿರುವ ಕ್ಲೇಮ್ ಕಮಿಷನರ್ ರಾಮನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಕಚೇರಿ ಹಾಗೂ ಮೂಲಸೌಕರ್ಯ ಒದಗಿಸಲಾಗಿದೆ. ಮತ್ತೊಂದು ಬಂದ್ಗೆ ಸಂಬಂಧಿಸಿದಂತೆಯೂ ಕ್ಲೇಮ್ ಕಮಿಷನರ್ ನೇಮಕ ಮಾಡಲಾಗಿದೆ. ಇವರೆಡರ ಪ್ರಗತಿ ವರದಿ ಸಲ್ಲಿಸಲು ಕಾಲಾವಕಾಶ ಬೇಕು'ಎಂದು ಸರ್ಕಾರಿ ವಕೀಲರು ಕೋರಿದರು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ’ಈ ಬಗ್ಗೆ ವರದಿ ಸಲ್ಲಿಸಿ'ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.