<p><strong>ಬೆಂಗಳೂರು:</strong> ಶಾಲಾ– ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವದ ಗುಣ, ದೇಶಭಕ್ತಿ ಬೆಳೆಸುವ ಉದ್ದೇಶದಿಂದ ನಗರದಲ್ಲಿ ಆಯೋಜಿಸಿದ್ದ 10 ದಿನಗಳ ಎನ್ಸಿಸಿ ಶಿಬಿರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.</p>.<p>ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಕೆಡೆಟ್ಗಳು ಉತ್ಸಾಹದಿಂದ ಶಿಬಿರದಲ್ಲಿ ಭಾಗವಹಿಸಿದ್ದರು.</p>.<p>ಕಮಾಂಡೆಂಟ್ ಕರ್ನಲ್ ಪಂಕಜ್ ಸಿನ್ಹಾ ತೇತೃತ್ವದ ತಂಡವು ಶಿಬಿರ ಆಯೋಜಿಸಿತ್ತು. ತರಬೇತಿಯು ಕಠಿಣ ಮಿಲಿಟರಿ ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿ ಎರಡನ್ನೂ ಒಳಗೊಂಡಿತ್ತು.</p>.<p>ಶಿಸ್ತು ಮತ್ತು ಸಮಯ ಪಾಲನೆ, ಶಸ್ತ್ರಾಸ್ತ್ರ ನಿರ್ವಹಣೆಯ ಬಗ್ಗೆ ತಿಳಿವಳಿಕೆ, ತುರ್ತು ಸನ್ನಿವೇಶಗಳಲ್ಲಿ ಸ್ಪಂದನೆ, ಭದ್ರತೆ ಮತ್ತು ಜಾಗರೂಕತೆ, ಕಾವಲು ಮತ್ತು ರಕ್ಷಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.</p>.<p>ಇಂಡಿಯನ್ ಬ್ಯಾಂಕ್ನ ಮಾಜಿ ಅಧಿಕಾರಿ ಕೆ.ಎಲ್. ರಾವ್ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೆ ಪ್ರೇರಣೆ, ವೃತ್ತಿ ಸಮಾಲೋಚನೆ, ಸಾಮಾಜಿಕ ಸಮಸ್ಯೆ, ಪರಿಹಾರ ಕುರಿತು ಉಪನ್ಯಾಸ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಶಾಲಾ– ಕಾಲೇಜು ವಿದ್ಯಾರ್ಥಿಗಳಲ್ಲಿ ಶಿಸ್ತು, ನಾಯಕತ್ವದ ಗುಣ, ದೇಶಭಕ್ತಿ ಬೆಳೆಸುವ ಉದ್ದೇಶದಿಂದ ನಗರದಲ್ಲಿ ಆಯೋಜಿಸಿದ್ದ 10 ದಿನಗಳ ಎನ್ಸಿಸಿ ಶಿಬಿರ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.</p>.<p>ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಕೆಡೆಟ್ಗಳು ಉತ್ಸಾಹದಿಂದ ಶಿಬಿರದಲ್ಲಿ ಭಾಗವಹಿಸಿದ್ದರು.</p>.<p>ಕಮಾಂಡೆಂಟ್ ಕರ್ನಲ್ ಪಂಕಜ್ ಸಿನ್ಹಾ ತೇತೃತ್ವದ ತಂಡವು ಶಿಬಿರ ಆಯೋಜಿಸಿತ್ತು. ತರಬೇತಿಯು ಕಠಿಣ ಮಿಲಿಟರಿ ಶಿಸ್ತು ಮತ್ತು ಸಾಮಾಜಿಕ ಜವಾಬ್ದಾರಿ ಎರಡನ್ನೂ ಒಳಗೊಂಡಿತ್ತು.</p>.<p>ಶಿಸ್ತು ಮತ್ತು ಸಮಯ ಪಾಲನೆ, ಶಸ್ತ್ರಾಸ್ತ್ರ ನಿರ್ವಹಣೆಯ ಬಗ್ಗೆ ತಿಳಿವಳಿಕೆ, ತುರ್ತು ಸನ್ನಿವೇಶಗಳಲ್ಲಿ ಸ್ಪಂದನೆ, ಭದ್ರತೆ ಮತ್ತು ಜಾಗರೂಕತೆ, ಕಾವಲು ಮತ್ತು ರಕ್ಷಣೆ ಕುರಿತು ಪ್ರಾತ್ಯಕ್ಷಿಕೆ ನೀಡಲಾಯಿತು.</p>.<p>ಇಂಡಿಯನ್ ಬ್ಯಾಂಕ್ನ ಮಾಜಿ ಅಧಿಕಾರಿ ಕೆ.ಎಲ್. ರಾವ್ ಅವರು ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗೆ ಪ್ರೇರಣೆ, ವೃತ್ತಿ ಸಮಾಲೋಚನೆ, ಸಾಮಾಜಿಕ ಸಮಸ್ಯೆ, ಪರಿಹಾರ ಕುರಿತು ಉಪನ್ಯಾಸ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>