ಹೊರವಲಯದ ವ್ಯಕ್ತಿಗಳನ್ನು ಸಂಪರ್ಕಿಸುವುದು ಹಾಗೂ ಅವರಿಗೆ ಚಿಕಿತ್ಸೆ ಕೊಡುವುದು ಸವಾಲಿನ ಕೆಲಸ. ಹೀಗಾಗಿ, ಸಂಸ್ಥೆಗೆ ಬರಲು ಕಷ್ಟ ಆಗುವವರಿಗೆ ಅನುಕೂಲ ಕಲ್ಪಿಸಲು ಸಂಚಾರಿ ಕೇಂದ್ರ ಆರಂಭಿಸಲಾಗಿದೆ. ಬಸ್ನಲ್ಲಿ ನಾಲ್ಕು ಕಿವಿ ತಪಾಸಣೆ ಮಾಡುವ ಸಾಧನಗಳನ್ನು ಅಳವಡಿಸಲಾಗಿದೆ. ಯಂತ್ರಗಳ ಸಹಾಯದಿಂದ ಶ್ರವಣದೋಷವನ್ನು, ದೇಹದ ಸಮತೋಲನದ ತೊಂದರೆ ಹಾಗೂ ತಲೆ ಸುತ್ತು ಬರುವ ವ್ಯಕ್ತಿಗಳ ಪರೀಕ್ಷೆ ಮಾಡಬಹುದು’ ಎಂದು ಸಂಸ್ಥೆಯ ಮುಖ್ಯಸ್ಥ ಡಾ.ಎಂ.ಎಸ್.ವೆಂಕಟೇಶ್ ಮಾಹಿತಿ ನೀಡಿದರು.