<p><strong>ಬೆಂಗಳೂರು</strong>: ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿ ಸುಮಿತ್ರಾ ಎಂಬುವರನ್ನು ಸೋಮವಾರ ಬೆಳಿಗ್ಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಆರೋಪಿ ಕಾಳಪ್ಪ, ಕೃತ್ಯದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.</p>.<p>ಸುಮಿತ್ರಾ ಹಾಗೂ ಕಾಳಪ್ಪ ಕೆಲ ವರ್ಷಗಳ ಹಿಂದೆ ಮದುವೆ ಆಗಿದ್ದರು. ಇತ್ತೀಚೆಗೆ ಅವರ ನಡುವೆ ಜಗಳ ಆಗುತ್ತಿತ್ತು. ಹಬ್ಬದ ದಿನವಾದ ಸೋಮವಾರ ಬೆಳಿಗ್ಗೆ ಪುನಃ ಜಗಳ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.</p>.<p>ಅದೇ ವೇಳೆಯೇ ಆರೋಪಿ, ತನ್ನ ಬಳಿಯ ಪಿಸ್ತೂಲ್ನಿಂದ ಪತ್ನಿ ಸುಮಿತ್ರಾ ಮೇಲೆ ಗುಂಡು ಹಾರಿಸಿದ್ದಾನೆ. ಸುಮಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಪತ್ನಿ ಹತ್ಯೆ ನಂತರ ಆರೋಪಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.</p>.<p>'ಸುಮಿತ್ರಾ ಹತ್ಯೆ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕಾಳಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಹರೆಳಿಕರ ಪಡೆಯಲಾಗುವುದು' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಸವೇಶ್ವರನಗರ ಠಾಣೆ ವ್ಯಾಪ್ತಿಯಲ್ಲಿ ಸುಮಿತ್ರಾ ಎಂಬುವರನ್ನು ಸೋಮವಾರ ಬೆಳಿಗ್ಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಆರೋಪಿ ಕಾಳಪ್ಪ, ಕೃತ್ಯದ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.</p>.<p>ಸುಮಿತ್ರಾ ಹಾಗೂ ಕಾಳಪ್ಪ ಕೆಲ ವರ್ಷಗಳ ಹಿಂದೆ ಮದುವೆ ಆಗಿದ್ದರು. ಇತ್ತೀಚೆಗೆ ಅವರ ನಡುವೆ ಜಗಳ ಆಗುತ್ತಿತ್ತು. ಹಬ್ಬದ ದಿನವಾದ ಸೋಮವಾರ ಬೆಳಿಗ್ಗೆ ಪುನಃ ಜಗಳ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು.</p>.<p>ಅದೇ ವೇಳೆಯೇ ಆರೋಪಿ, ತನ್ನ ಬಳಿಯ ಪಿಸ್ತೂಲ್ನಿಂದ ಪತ್ನಿ ಸುಮಿತ್ರಾ ಮೇಲೆ ಗುಂಡು ಹಾರಿಸಿದ್ದಾನೆ. ಸುಮಿತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು.</p>.<p>ಪತ್ನಿ ಹತ್ಯೆ ನಂತರ ಆರೋಪಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.</p>.<p>'ಸುಮಿತ್ರಾ ಹತ್ಯೆ ಸಂಬಂಧ ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಕಾಳಪ್ಪ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಹರೆಳಿಕರ ಪಡೆಯಲಾಗುವುದು' ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>