ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಅಪಘಾತ: ಸ್ಕೂಟರ್‌ ಸವಾರ ಸಾವು

Published 29 ಮಾರ್ಚ್ 2024, 15:48 IST
Last Updated 29 ಮಾರ್ಚ್ 2024, 15:48 IST
ಅಕ್ಷರ ಗಾತ್ರ

ಬೆಂಗಳೂರು: ಹೆಬ್ಬಾಳ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಿಗ್ಗೆ ಸ್ಕೂಟರ್‌ ಹಾಗೂ ಟ್ರ್ಯಾಕ್ಟರ್‌ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ಧಾರೆ.

ಯಶವಂತಪುರದ ನಿವಾಸಿ ಮಹೇಶ್ (21) ಮೃತಪಟ್ಟವರು.

‘ಶುಕ್ರವಾರ ಬೆಳಿಗ್ಗೆ ಮಹೇಶ್ ಅವರು ಕೆಲಸಕ್ಕೆ ತೆರಳುವಾಗ ಸ್ಕೂಟರ್‌ನಲ್ಲಿ ಮತ್ತೊಬ್ಬರನ್ನು ಕರೆದೊಯ್ಯುತ್ತಿದ್ದರು. ಮಾರ್ಗಮಧ್ಯೆ ವೀರಣ್ಣನಪಾಳ್ಯದ ಸಮೀಪದಲ್ಲಿ ಟ್ರ್ಯಾಕ್ಟರ್ ಮುಂದೆ ಸಾಗುತ್ತಿತ್ತು. ಆಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಬಿದ್ದಿದ್ದರು. ಅವರ ಮೇಲೆಯೇ ಟ್ರ್ಯಾಕ್ಟರ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT