‘ಶುಕ್ರವಾರ ಬೆಳಿಗ್ಗೆ ಮಹೇಶ್ ಅವರು ಕೆಲಸಕ್ಕೆ ತೆರಳುವಾಗ ಸ್ಕೂಟರ್ನಲ್ಲಿ ಮತ್ತೊಬ್ಬರನ್ನು ಕರೆದೊಯ್ಯುತ್ತಿದ್ದರು. ಮಾರ್ಗಮಧ್ಯೆ ವೀರಣ್ಣನಪಾಳ್ಯದ ಸಮೀಪದಲ್ಲಿ ಟ್ರ್ಯಾಕ್ಟರ್ ಮುಂದೆ ಸಾಗುತ್ತಿತ್ತು. ಆಗ ಅಪಘಾತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಬಿದ್ದಿದ್ದರು. ಅವರ ಮೇಲೆಯೇ ಟ್ರ್ಯಾಕ್ಟರ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಸಂಚಾರ ಪೊಲೀಸರು ತಿಳಿಸಿದರು.