ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ತ್ವರಿತವಾಗಿ ಆಗಿರುವ ನಗರೀಕರಣ, ಜನಸಂಖ್ಯಾ ಹೆಚ್ಚಳ, ಅಸಮರ್ಪಕ ನೀರಿನ ನಿರ್ವಹಣೆಯಿಂದಾಗಿ ನೀರಿನ ಮೂಲಗಳೇ ಬರಿದಾಗುತ್ತಿವೆ. ಅಂತರ್ಜಲ ಮಟ್ಟ ಪಾತಾಳದತ್ತ ಕುಸಿಯುತ್ತಿದೆ’ ಎಂದರು.