<p><strong>ಬೆಂಗಳೂರು:</strong> ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಬುಧವಾರ ರಾತ್ರಿ ಮನೆಗೆ ತೆರಳುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳಿಗಾಗಿ ಹುಳಿಮಾವು ಠಾಣೆಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.</p>.<p>ನಿಶ್ಚಿತ್ (13) ಕೊಲೆಯಾದ ಬಾಲಕ. </p>.<p>ನಿಶ್ಚಿತ್ ಅವರ ತಂದೆ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ನಿಶ್ಚಿತ್ ಮನೆಪಾಠಕ್ಕೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ. ಆಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಬಾಲಕನನ್ನು ಅಪಹರಣ ಮಾಡಿದ್ದರು. ನಂತರ, ನಿಶ್ಚಿತ್ ತಂದೆಗೆ ಕರೆ ಮಾಡಿದ್ದ ಆರೋಪಿಗಳು, ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಅಪಹರಣದ ಸುದ್ದಿ ಕೇಳಿ ನಿಶ್ಚಿತ್ ಅವರ ಪೋಷಕರು ಹಾಗೂ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಹುಳಿಮಾವು ಠಾಣೆಗೆ ಮಾಹಿತಿ ನೀಡಿದ್ದರು. ಆರೋಪಿಗಳ ಪತ್ತೆ ಹಾಗೂ ಬಾಲಕನ ರಕ್ಷಣಾ ಕಾರ್ಯಾಚರಣೆಯನ್ನು ಪೊಲೀಸರು ಆರಂಭಿಸಿದ್ದರು. ಮತ್ತೊಂದೆಡೆ ಬಾಲಕನ ಪೋಷಕರು, ಅಪಹರಣಕಾರರಿಗೆ ನೀಡಲು ₹5 ಲಕ್ಷವನ್ನು ಸಿದ್ಧ ಮಾಡಿಕೊಂಡಿದ್ದರು. ಹಣ ನೀಡಿ ಮಗನನ್ನು ರಕ್ಷಿಸಲು ಮುಂದಾಗಿದ್ದರು. ಅಷ್ಟರಲ್ಲಿ ಬಾಲಕನ ಮೃತದೇಹವು ಕಗ್ಗಲಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಸದ್ಯ ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರತ್ಯೇಕ ತಂಡ ರಚಿಸಲಾಗಿದೆ. ಬಾಲಕನನ್ನು ಅಪಹರಣ ಮಾಡಿದ ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>‘ಬಾಲಕನ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಮೃತದೇಹದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಂಡೆಯ ಮೇಲೆ ಎಸೆದು ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವು ಬಹುತೇಕ ಸುಟ್ಟು ಹೋಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿಗಳು ಪೋಷಕರಿಗೆ ಕರೆ ಮಾಡಿದ್ದ ಸಂಪರ್ಕ ಸಂಖ್ಯೆಯನ್ನು ಪಡೆದುಕೊಳ್ಳಲಾಗಿದೆ. ಕೆಲವು ಸುಳಿವು ಸಿಕ್ಕಿದ್ದು ಶೀಘ್ರದಲೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು. </p>.<p>ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ಎಂ. ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ.ಬಾಬಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p><strong>ಪೋಷಕರ ಆಕ್ರಂದನ:</strong> ಕೊಲೆಯಾದ ಮಾಹಿತಿ ತಿಳಿಯುತ್ತಿದ್ದಂತೆಯೇ ನಿಶ್ಚಿತ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಬುಧವಾರ ರಾತ್ರಿ ಮನೆಗೆ ತೆರಳುತ್ತಿದ್ದ ಬಾಲಕನನ್ನು ಅಪಹರಿಸಿ ಕೊಲೆ ಮಾಡಲಾಗಿದ್ದು, ಆರೋಪಿಗಳಿಗಾಗಿ ಹುಳಿಮಾವು ಠಾಣೆಯ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.</p>.<p>ನಿಶ್ಚಿತ್ (13) ಕೊಲೆಯಾದ ಬಾಲಕ. </p>.<p>ನಿಶ್ಚಿತ್ ಅವರ ತಂದೆ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ನಿಶ್ಚಿತ್ ಮನೆಪಾಠಕ್ಕೆ ಹೋಗಿ ಮನೆಗೆ ವಾಪಸ್ ಬರುತ್ತಿದ್ದ. ಆಗ ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಬಾಲಕನನ್ನು ಅಪಹರಣ ಮಾಡಿದ್ದರು. ನಂತರ, ನಿಶ್ಚಿತ್ ತಂದೆಗೆ ಕರೆ ಮಾಡಿದ್ದ ಆರೋಪಿಗಳು, ₹5 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.</p>.<p>ಅಪಹರಣದ ಸುದ್ದಿ ಕೇಳಿ ನಿಶ್ಚಿತ್ ಅವರ ಪೋಷಕರು ಹಾಗೂ ಕುಟುಂಬಸ್ಥರು ಆಘಾತಕ್ಕೆ ಒಳಗಾಗಿದ್ದರು. ತಕ್ಷಣವೇ ಹುಳಿಮಾವು ಠಾಣೆಗೆ ಮಾಹಿತಿ ನೀಡಿದ್ದರು. ಆರೋಪಿಗಳ ಪತ್ತೆ ಹಾಗೂ ಬಾಲಕನ ರಕ್ಷಣಾ ಕಾರ್ಯಾಚರಣೆಯನ್ನು ಪೊಲೀಸರು ಆರಂಭಿಸಿದ್ದರು. ಮತ್ತೊಂದೆಡೆ ಬಾಲಕನ ಪೋಷಕರು, ಅಪಹರಣಕಾರರಿಗೆ ನೀಡಲು ₹5 ಲಕ್ಷವನ್ನು ಸಿದ್ಧ ಮಾಡಿಕೊಂಡಿದ್ದರು. ಹಣ ನೀಡಿ ಮಗನನ್ನು ರಕ್ಷಿಸಲು ಮುಂದಾಗಿದ್ದರು. ಅಷ್ಟರಲ್ಲಿ ಬಾಲಕನ ಮೃತದೇಹವು ಕಗ್ಗಲಿಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಗುರುವಾರ ಸಂಜೆ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ.</p>.<p>ಸದ್ಯ ಹುಳಿಮಾವು ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪ್ರತ್ಯೇಕ ತಂಡ ರಚಿಸಲಾಗಿದೆ. ಬಾಲಕನನ್ನು ಅಪಹರಣ ಮಾಡಿದ ಸ್ಥಳದ ಆಸುಪಾಸಿನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.</p>.<p>‘ಬಾಲಕನ ಕುತ್ತಿಗೆ ಕೊಯ್ದು ಕೊಲೆ ಮಾಡಲಾಗಿದೆ. ಕೊಲೆ ಮಾಡಿದ ಬಳಿಕ ಮೃತದೇಹದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಬಂಡೆಯ ಮೇಲೆ ಎಸೆದು ಆರೋಪಿಗಳು ಪರಾರಿ ಆಗಿದ್ದಾರೆ. ಮೃತದೇಹವು ಬಹುತೇಕ ಸುಟ್ಟು ಹೋಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಆರೋಪಿಗಳು ಪೋಷಕರಿಗೆ ಕರೆ ಮಾಡಿದ್ದ ಸಂಪರ್ಕ ಸಂಖ್ಯೆಯನ್ನು ಪಡೆದುಕೊಳ್ಳಲಾಗಿದೆ. ಕೆಲವು ಸುಳಿವು ಸಿಕ್ಕಿದ್ದು ಶೀಘ್ರದಲೇ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು. </p>.<p>ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ಎಂ. ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಎಸ್ಪಿ ಸಿ.ಕೆ.ಬಾಬಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p><strong>ಪೋಷಕರ ಆಕ್ರಂದನ:</strong> ಕೊಲೆಯಾದ ಮಾಹಿತಿ ತಿಳಿಯುತ್ತಿದ್ದಂತೆಯೇ ನಿಶ್ಚಿತ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>