<p><strong>ಬೆಂಗಳೂರು:</strong>ಪೌರತ್ವ ತಿದ್ದುಪಡಿ ಕಾಯ್ದೆಬೆಂಬಲಿಸಿ ನೂರಾರು ಮಂದಿ ಟೌನ್ಹಾಲ್ ಎದುರು ಭಾನುವಾರ ಘೋಷಣೆಗಳನ್ನು ಕೂಗಿದರು. ಕಾಯ್ದೆ ವಿರೋಧಿಸುತ್ತಿರುವವ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.</p>.<p>ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ‘ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ಸಂಯೋಜನೆ ಮಾಡುವುದಿಲ್ಲ’ ಎಂದು ನುಡಿದರು.</p>.<p>‘ನಾವು 5 ಶತಕೋಟಿ ರೂಪಾಯಿಯ ಅರ್ಥವ್ಯವಸ್ಥೆ ರೂಪಿಸುವ ಪ್ರಯತ್ನದಲ್ಲಿದ್ದೇವೆ. ನೀವು ಇಷ್ಟು ವರ್ಷ ಪ್ರತಿಪಾದಿಸಿದ ದುರ್ಬಲಜಾತ್ಯತೀತಪರಿಕಲ್ಪನೆ ಅರ್ಥ ಕಳೆದುಕೊಳ್ಳಲಿದೆ’ಎಂದು ಹೇಳಿದರು.</p>.<p>ಆರಂಭದಲ್ಲಿಸುಮಾರು 250 ಮಂದಿ ಸೇರಿದ್ದರು. ಸಂಖ್ಯೆ ಕ್ರಮೇಣ ಹೆಚ್ಚಾಯಿತು. ವಿವಿಧ ಘೋಷಣೆಗಳ ಜೊತೆಗೆ ‘ಮೋದಿ’ ‘ಮೋದಿ’ ಎಂದು ಅವರು ಕೂಗುತ್ತಿದ್ದಾರೆ. ‘ಪೌರತ್ವ ತಿದ್ದುಪಡಿ ಕಾಯ್ದೆಯು ಜಾತ್ಯತೀತವಾಗಿದೆ. ಭಾರತವನ್ನು ಜಾತ್ಯತೀತ ಮೂಲಭೂತವಾದಿಗಳಿಂದ ಕಾಪಾಡಬೇಕಿದೆ’ ಎಂದು ಅವರು ತಂದಿರುವ ಭಿತ್ತಿಪತ್ರಗಳು ಹೇಳುತ್ತಿವೆ.</p>.<p>‘ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆಗಳು ಪ್ರತ್ಯೇಕವಾದವುಗಳು. ಈ ಕಾಯ್ದೆಗಳಿಂದ ಭಾರತೀಯ ನಾಗರಿಕರಿಗೆ ಯಾವುದೇ ತೊಂದರೆಯಿಲ್ಲ. ಹಿಂದೂ ಅಥವಾ ಮುಸ್ಲಿಮರಿಗೆ ಈ ಕಾಯ್ದೆಗಳಿಂದ ಬಾಧಕವಿಲ್ಲ’ ಎಂದು ಕೆಲವರು‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>ಪೌರತ್ವ ತಿದ್ದುಪಡಿ ಕಾಯ್ದೆಬೆಂಬಲಿಸಿ ನೂರಾರು ಮಂದಿ ಟೌನ್ಹಾಲ್ ಎದುರು ಭಾನುವಾರ ಘೋಷಣೆಗಳನ್ನು ಕೂಗಿದರು. ಕಾಯ್ದೆ ವಿರೋಧಿಸುತ್ತಿರುವವ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.</p>.<p>ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ‘ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರಾಷ್ಟ್ರೀಯ ಜನಸಂಖ್ಯಾ ನೋಂದಣಿಗೆ ಸಂಯೋಜನೆ ಮಾಡುವುದಿಲ್ಲ’ ಎಂದು ನುಡಿದರು.</p>.<p>‘ನಾವು 5 ಶತಕೋಟಿ ರೂಪಾಯಿಯ ಅರ್ಥವ್ಯವಸ್ಥೆ ರೂಪಿಸುವ ಪ್ರಯತ್ನದಲ್ಲಿದ್ದೇವೆ. ನೀವು ಇಷ್ಟು ವರ್ಷ ಪ್ರತಿಪಾದಿಸಿದ ದುರ್ಬಲಜಾತ್ಯತೀತಪರಿಕಲ್ಪನೆ ಅರ್ಥ ಕಳೆದುಕೊಳ್ಳಲಿದೆ’ಎಂದು ಹೇಳಿದರು.</p>.<p>ಆರಂಭದಲ್ಲಿಸುಮಾರು 250 ಮಂದಿ ಸೇರಿದ್ದರು. ಸಂಖ್ಯೆ ಕ್ರಮೇಣ ಹೆಚ್ಚಾಯಿತು. ವಿವಿಧ ಘೋಷಣೆಗಳ ಜೊತೆಗೆ ‘ಮೋದಿ’ ‘ಮೋದಿ’ ಎಂದು ಅವರು ಕೂಗುತ್ತಿದ್ದಾರೆ. ‘ಪೌರತ್ವ ತಿದ್ದುಪಡಿ ಕಾಯ್ದೆಯು ಜಾತ್ಯತೀತವಾಗಿದೆ. ಭಾರತವನ್ನು ಜಾತ್ಯತೀತ ಮೂಲಭೂತವಾದಿಗಳಿಂದ ಕಾಪಾಡಬೇಕಿದೆ’ ಎಂದು ಅವರು ತಂದಿರುವ ಭಿತ್ತಿಪತ್ರಗಳು ಹೇಳುತ್ತಿವೆ.</p>.<p>‘ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆಗಳು ಪ್ರತ್ಯೇಕವಾದವುಗಳು. ಈ ಕಾಯ್ದೆಗಳಿಂದ ಭಾರತೀಯ ನಾಗರಿಕರಿಗೆ ಯಾವುದೇ ತೊಂದರೆಯಿಲ್ಲ. ಹಿಂದೂ ಅಥವಾ ಮುಸ್ಲಿಮರಿಗೆ ಈ ಕಾಯ್ದೆಗಳಿಂದ ಬಾಧಕವಿಲ್ಲ’ ಎಂದು ಕೆಲವರು‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>