ದಕ್ಷಿಣ ಬೆಂಗಳೂರು ರಾಜರಾಜೇಶ್ವರಿ ನಗರ ಮೂರನೇ ಹಂತ, ಬಿಇಎಂಎಲ್ ಲೇಔಟ್ನಲ್ಲಿರುವ ಪಂಚಶೀಲಬ್ಲಾಕ್ ನಿವಾಸಿ ಡಾ. ನರೇಂದ್ರ ನಿಖಿತಾ ಎಂಬವರು ಮರದ ಕಾಂಡಕ್ಕೆಪಾದರಸ ಇಂಜೆಕ್ಷನ್ ಚುಚ್ಚಿದ್ದಾರೆ.
ಅಕ್ಟೋಬರ್ 30ರಂದು ಅಲ್ಲಿನ ನಿವಾಸಿಗಳ ಸಂಘ ಡಾ. ನರೇಂದ್ರ ಅವರಲ್ಲಿ ಈ ಬಗ್ಗೆ ಕೇಳಿದಾಗ ತನ್ನ ಮನೆ ಮುಂದೆ ಇರುವ 15 ವರ್ಷ ಪ್ರಾಯದ ಮರವನ್ನು ಕಡಿಯಲು ಬಿಬಿಎಂಪಿ ಅನುಮತಿಗಾಗಿ ಮನವಿ ಮಾಡಿದ್ದೇನೆ ಎಂದಿದ್ದರು. ಆರ್ಆರ್ ನಗರದ ಬಿಬಿಎಂಪಿ ಟ್ರೀ ಆಫೀಸರ್ ಭಾನು ಪ್ರಕಾಶ್ ಅವರಿಂದ ಯಾವುದೇ ಪ್ರತಿಕ್ರಿಯೆ ಲಭಿಸದೇ ಇದ್ದಾಗಡಾ. ನರೇಂದ್ರ ಅವರು ಮರಕ್ಕೆ ಪಾದರಸ ಇಂಜೆಕ್ಷನ್ ಚುಚ್ಚಿದ್ದಾರೆ ಎಂದು ನಿವಾಸಿಗಳ ಸಂಘ ಆರೋಪಿಸಿದೆ.