<p><strong>ಬೆಂಗಳೂರು</strong>: ಕೆಲಸ ಮಾಡುತ್ತಿದ್ದ ಮನೆಯಲ್ಲೇ ₹25 ಲಕ್ಷ ಕಳ್ಳತನ ಮಾಡಿದ್ದ ಮನೆಗೆಲಸದಾಕೆಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ, ₹15 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.</p>.<p>ಜ್ಞಾನಭಾರತಿ ಲೇಔಟ್ ನಿವಾಸಿ ಬದರಿ ರಂಗನ್ ಎಂಬುವರ ಮನೆಯಲ್ಲಿ ರತ್ನಮ್ಮ ಎಂಬುವವರು ಹತ್ತು ವರ್ಷಗಳಿಂದ ಮನೆಗೆಲಸ ಮಾಡಿಕೊಂಡಿದ್ದರು.</p>.<p>ಎರಡು ವರ್ಷದ ಹಿಂದೆ ಬದರಿ ರಂಗನ್ ಅವರು ಫ್ಲ್ಯಾಟ್ವೊಂದನ್ನು ಮಾರಾಟ ಮಾಡಿದ್ದು, ಅದರಿಂದ ಬಂದಿದ್ದ ₹25 ಲಕ್ಷ ಹಣವನ್ನು ಬೀರುವಿನಲ್ಲಿಟ್ಟಿದ್ದರು. ಇತ್ತೀಚೆಗೆ ನಿವೇಶನ ಖರೀದಿಸಲು ಮುಂಗಡ ಹಣ ನೀಡಬೇಕಾಗಿದ್ದರಿಂದ ಬೀರುವನ್ನು ತೆರೆದು ನೋಡಿದಾಗ ಹಣ ಇರಲಿಲ್ಲ. ಗಾಬರಿಗೊಂಡ ಅವರು ಪತ್ನಿ ಮತ್ತು ತಾಯಿಯನ್ನು ವಿಚಾರಿಸಿದಾಗ ಹಣದ ಬಗ್ಗೆ ಗೊತ್ತಿಲ್ಲವೆಂದು ಹೇಳಿದ್ದಾರೆ.</p>.<p>ಬದರಿ ಅವರು ಅನುಮಾನಗೊಂಡು ಮನೆಯಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ ರತ್ನಮ್ಮ ಅವರು ಹಣ ಕಳವು ಮಾಡಿರುವ ದೃಶ್ಯ ಸೆರೆಯಾಗಿದೆ.</p>.<p>ತಕ್ಷಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ ಪೊಲೀಸರು, ಆಕೆಯ ಮನೆಯನ್ನು ಶೋಧಿಸಿ ₹15 ಲಕ್ಷ ಹಣವನ್ನು ವಶ ಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೆಲಸ ಮಾಡುತ್ತಿದ್ದ ಮನೆಯಲ್ಲೇ ₹25 ಲಕ್ಷ ಕಳ್ಳತನ ಮಾಡಿದ್ದ ಮನೆಗೆಲಸದಾಕೆಯನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿ, ₹15 ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.</p>.<p>ಜ್ಞಾನಭಾರತಿ ಲೇಔಟ್ ನಿವಾಸಿ ಬದರಿ ರಂಗನ್ ಎಂಬುವರ ಮನೆಯಲ್ಲಿ ರತ್ನಮ್ಮ ಎಂಬುವವರು ಹತ್ತು ವರ್ಷಗಳಿಂದ ಮನೆಗೆಲಸ ಮಾಡಿಕೊಂಡಿದ್ದರು.</p>.<p>ಎರಡು ವರ್ಷದ ಹಿಂದೆ ಬದರಿ ರಂಗನ್ ಅವರು ಫ್ಲ್ಯಾಟ್ವೊಂದನ್ನು ಮಾರಾಟ ಮಾಡಿದ್ದು, ಅದರಿಂದ ಬಂದಿದ್ದ ₹25 ಲಕ್ಷ ಹಣವನ್ನು ಬೀರುವಿನಲ್ಲಿಟ್ಟಿದ್ದರು. ಇತ್ತೀಚೆಗೆ ನಿವೇಶನ ಖರೀದಿಸಲು ಮುಂಗಡ ಹಣ ನೀಡಬೇಕಾಗಿದ್ದರಿಂದ ಬೀರುವನ್ನು ತೆರೆದು ನೋಡಿದಾಗ ಹಣ ಇರಲಿಲ್ಲ. ಗಾಬರಿಗೊಂಡ ಅವರು ಪತ್ನಿ ಮತ್ತು ತಾಯಿಯನ್ನು ವಿಚಾರಿಸಿದಾಗ ಹಣದ ಬಗ್ಗೆ ಗೊತ್ತಿಲ್ಲವೆಂದು ಹೇಳಿದ್ದಾರೆ.</p>.<p>ಬದರಿ ಅವರು ಅನುಮಾನಗೊಂಡು ಮನೆಯಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲಿಸಿದಾಗ ರತ್ನಮ್ಮ ಅವರು ಹಣ ಕಳವು ಮಾಡಿರುವ ದೃಶ್ಯ ಸೆರೆಯಾಗಿದೆ.</p>.<p>ತಕ್ಷಣ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ ಪೊಲೀಸರು, ಆಕೆಯ ಮನೆಯನ್ನು ಶೋಧಿಸಿ ₹15 ಲಕ್ಷ ಹಣವನ್ನು ವಶ ಪಡಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>