<p><strong>ಬೆಂಗಳೂರು:</strong> ವಾಹನಗಳ ನಕಲಿ ನೋಂದಣಿ ಪ್ರಮಾಣಪತ್ರ (ಆರ್.ಸಿ) ಮತ್ತು ವಿಮೆ ಮಾಡಿ ಕೊಡುತ್ತಿದ್ದ ಇಬ್ಬರನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.</p>.<p>ಪೀಣ್ಯ ಬಳಿಯ ಇಂದಿರಾ ಪ್ರಿಯದರ್ಶಿನಿ ನಗರದ ಶ್ರೀಧರ್ (29) ಮತ್ತು ಕೆ.ಪಿ. ಅಗ್ರಹಾರ ಬಳಿ ಭುವನೇಶ್ವರಿ ನಗರದ ಸಂತೋಷ್ (20) ಬಂಧಿತರು.</p>.<p>ಆರೋಪಿಗಳು ಕಾರು ಮತ್ತು ದ್ವಿಚಕ್ರ ವಾಹನಗಳು ಸೇರಿ ಒಟ್ಟು 135 ವಾಹನಗಳಿಗೆ ₹ 3,000ದಿಂದ ₹ 4,000 ಹಣ ಪಡೆದು ನಕಲಿ ಆರ್.ಸಿ ಮಾಡಿಕೊಟ್ಟಿರುವುದು ಮತ್ತು 500 ವಾಹನಗಳಿಗೆ ₹ 500ರಿಂದ ₹ 1,000 ಪಡೆದು ನಕಲಿ ವಿಮೆ ಮಾಡಿಕೊಟ್ಟಿರುವುದು ವಿಚಾರಣೆಯಿಂದ ಗೊತ್ತಾಗಿದೆ.</p>.<p>‘ಆರೋಪಿಗಳು ಆರ್ಟಿಒ ಕಚೇರಿಯಿಂದ ಸ್ಮಾರ್ಟ್ ಕಾರ್ಡ್ಗಳನ್ನು ಕಳವು ಮಾಡಿ, ಅದರಲ್ಲಿದ್ದ ಹೆಸರನ್ನು ಅಳಸಿ ಮರು ಮುದ್ರಣ ಮಾಡಿ ದ್ವಿಚಕ್ರ ವಾಹನಗಳು ಮತ್ತು ಕಾರುಗಳಿಗೆ ನಕಲಿ ಆರ್.ಸಿ ಕಾರ್ಡ್ ಮಾಡುತ್ತಿದ್ದರು. ಅಲ್ಲದೆ, ₹500 ರಿಂದ ₹1,000ಕ್ಕೆ ವಿಮೆ ಕೂಡಾ ಮಾಡಿಸಿಕೊಡುತ್ತಿದ್ದರು. ಆರ್ಟಿಒ ಕಚೇರಿಯಲ್ಲಿ ಮಧ್ಯವರ್ತಿಯಾಗಿದ್ದ (ಬ್ರೋಕರ್) ಸಂತೋಷ್, ಸ್ಮಾರ್ಟ್ ಕಾರ್ಡ್ಗಳನ್ನು ಕಳವು ಮಾಡಿ ಶ್ರೀಧರ್ಗೆ ನೀಡುತ್ತಿದ್ದ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಾಹನಗಳ ನಕಲಿ ನೋಂದಣಿ ಪ್ರಮಾಣಪತ್ರ (ಆರ್.ಸಿ) ಮತ್ತು ವಿಮೆ ಮಾಡಿ ಕೊಡುತ್ತಿದ್ದ ಇಬ್ಬರನ್ನು ಕೇಂದ್ರ ಅಪರಾಧ ದಳ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.</p>.<p>ಪೀಣ್ಯ ಬಳಿಯ ಇಂದಿರಾ ಪ್ರಿಯದರ್ಶಿನಿ ನಗರದ ಶ್ರೀಧರ್ (29) ಮತ್ತು ಕೆ.ಪಿ. ಅಗ್ರಹಾರ ಬಳಿ ಭುವನೇಶ್ವರಿ ನಗರದ ಸಂತೋಷ್ (20) ಬಂಧಿತರು.</p>.<p>ಆರೋಪಿಗಳು ಕಾರು ಮತ್ತು ದ್ವಿಚಕ್ರ ವಾಹನಗಳು ಸೇರಿ ಒಟ್ಟು 135 ವಾಹನಗಳಿಗೆ ₹ 3,000ದಿಂದ ₹ 4,000 ಹಣ ಪಡೆದು ನಕಲಿ ಆರ್.ಸಿ ಮಾಡಿಕೊಟ್ಟಿರುವುದು ಮತ್ತು 500 ವಾಹನಗಳಿಗೆ ₹ 500ರಿಂದ ₹ 1,000 ಪಡೆದು ನಕಲಿ ವಿಮೆ ಮಾಡಿಕೊಟ್ಟಿರುವುದು ವಿಚಾರಣೆಯಿಂದ ಗೊತ್ತಾಗಿದೆ.</p>.<p>‘ಆರೋಪಿಗಳು ಆರ್ಟಿಒ ಕಚೇರಿಯಿಂದ ಸ್ಮಾರ್ಟ್ ಕಾರ್ಡ್ಗಳನ್ನು ಕಳವು ಮಾಡಿ, ಅದರಲ್ಲಿದ್ದ ಹೆಸರನ್ನು ಅಳಸಿ ಮರು ಮುದ್ರಣ ಮಾಡಿ ದ್ವಿಚಕ್ರ ವಾಹನಗಳು ಮತ್ತು ಕಾರುಗಳಿಗೆ ನಕಲಿ ಆರ್.ಸಿ ಕಾರ್ಡ್ ಮಾಡುತ್ತಿದ್ದರು. ಅಲ್ಲದೆ, ₹500 ರಿಂದ ₹1,000ಕ್ಕೆ ವಿಮೆ ಕೂಡಾ ಮಾಡಿಸಿಕೊಡುತ್ತಿದ್ದರು. ಆರ್ಟಿಒ ಕಚೇರಿಯಲ್ಲಿ ಮಧ್ಯವರ್ತಿಯಾಗಿದ್ದ (ಬ್ರೋಕರ್) ಸಂತೋಷ್, ಸ್ಮಾರ್ಟ್ ಕಾರ್ಡ್ಗಳನ್ನು ಕಳವು ಮಾಡಿ ಶ್ರೀಧರ್ಗೆ ನೀಡುತ್ತಿದ್ದ’ ಎಂದು ಸಿಸಿಬಿ ಪೊಲೀಸರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>