<p><strong>ಬೆಂಗಳೂರು:</strong> ನಗರದ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವಿದ್ಯುತ್ ಸ್ಥಾವರದಲ್ಲಿ ಶುಕ್ರವಾರ ನಸುಕಿನಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಉದ್ಯೋಗಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಥಾವರ ಇದೆ. ಇಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.</p>.<p>'ರಾತ್ರಿ ಪಾಳಿಯಲ್ಲಿ ಉದ್ಯೋಗಿಗಳು ಕೆಲಸ ಮಾಡುತ್ತಿದ್ದರು. ನಸುಕಿನ 3.30ರ ಸುಮಾರಿಗೆ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿತ್ತು' ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದರು.</p>.<p><br />'ಸ್ಥಾವರದಲ್ಲೇ ಇದ್ದ ಸಿಬ್ಬಂದಿ, ಭಾಗಶಃ ಬೆಂಕಿ ನಂದಿಸಿದ್ದರು. ಗಾಯಾಳುಗಳನ್ನು ಅವರೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಹೆಚ್ಚುವರಿ ವಾಹನಗಳು ಸ್ಥಾವರಕ್ಕೆ ಹೋಗಿ ಪೂರ್ತಿ ಬೆಂಕಿ ಆರಿಸಲಾಗಿದೆ' ಎಂದೂ ತಿಳಿಸಿದರು.</p>.<p>'ಬೆಳಿಗ್ಗೆ 3.30ರ ಸುಮಾರಿಗೆ ದೊಡ್ಡ ಶಬ್ಧ ಕೇಳಿಸಿತ್ತು. ಮನೆಯಿಂದ ಹೊರಗೆ ಬಂದು ನೋಡಿದಾಗ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದೆವು' ಎಂದು ಯಲಹಂಕ ಉಪನಗರ ನಿವಾಸಿಯೊಬ್ಬರು ಹೇಳಿದರು.</p>.<p><strong>ಆಸ್ಪತ್ರೆಗೆ ಅಲೆದಾಟ;</strong> ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಬೆಡ್ ಇಲ್ಲದ ಕಾರಣಕ್ಕೆ ವಾಪಸು ಕಳುಹಿಸಿದರು. ಮತ್ತೊಂದು ಆಸ್ಪತ್ರೆಗೆ ಹೋದರೂ ಗಾಯಾಳುಗಳಿಗೆ ಚಿಕಿತ್ಸೆ ಸಿಗಲಿಲ್ಲ ಎಂದು ಗೊತ್ತಾಗಿದೆ.</p>.<p>ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗೋಗರೆಯುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವಿದ್ಯುತ್ ಸ್ಥಾವರದಲ್ಲಿ ಶುಕ್ರವಾರ ನಸುಕಿನಲ್ಲಿ ಸ್ಫೋಟ ಸಂಭವಿಸಿದ್ದು, ಐವರು ಉದ್ಯೋಗಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.</p>.<p>ಯಲಹಂಕ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ಥಾವರ ಇದೆ. ಇಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ.</p>.<p>'ರಾತ್ರಿ ಪಾಳಿಯಲ್ಲಿ ಉದ್ಯೋಗಿಗಳು ಕೆಲಸ ಮಾಡುತ್ತಿದ್ದರು. ನಸುಕಿನ 3.30ರ ಸುಮಾರಿಗೆ ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿತ್ತು' ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದರು.</p>.<p><br />'ಸ್ಥಾವರದಲ್ಲೇ ಇದ್ದ ಸಿಬ್ಬಂದಿ, ಭಾಗಶಃ ಬೆಂಕಿ ನಂದಿಸಿದ್ದರು. ಗಾಯಾಳುಗಳನ್ನು ಅವರೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಹೆಚ್ಚುವರಿ ವಾಹನಗಳು ಸ್ಥಾವರಕ್ಕೆ ಹೋಗಿ ಪೂರ್ತಿ ಬೆಂಕಿ ಆರಿಸಲಾಗಿದೆ' ಎಂದೂ ತಿಳಿಸಿದರು.</p>.<p>'ಬೆಳಿಗ್ಗೆ 3.30ರ ಸುಮಾರಿಗೆ ದೊಡ್ಡ ಶಬ್ಧ ಕೇಳಿಸಿತ್ತು. ಮನೆಯಿಂದ ಹೊರಗೆ ಬಂದು ನೋಡಿದಾಗ ಸ್ಥಾವರದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಪೊಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಮಾಹಿತಿ ನೀಡಿದೆವು' ಎಂದು ಯಲಹಂಕ ಉಪನಗರ ನಿವಾಸಿಯೊಬ್ಬರು ಹೇಳಿದರು.</p>.<p><strong>ಆಸ್ಪತ್ರೆಗೆ ಅಲೆದಾಟ;</strong> ಗಾಯಾಳುಗಳನ್ನು ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಲ್ಲಿ ಬೆಡ್ ಇಲ್ಲದ ಕಾರಣಕ್ಕೆ ವಾಪಸು ಕಳುಹಿಸಿದರು. ಮತ್ತೊಂದು ಆಸ್ಪತ್ರೆಗೆ ಹೋದರೂ ಗಾಯಾಳುಗಳಿಗೆ ಚಿಕಿತ್ಸೆ ಸಿಗಲಿಲ್ಲ ಎಂದು ಗೊತ್ತಾಗಿದೆ.</p>.<p>ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಗೋಗರೆಯುತ್ತಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>