ಪ್ರತಿಷ್ಠಾನದ ಪ್ರಧಾನ ವ್ಯವಸ್ಥಾಪಕ ಹರೀಶ್ ಕುಮಾರ್ ಮಾತನಾಡಿ, ‘ಬೆಂಗಳೂರಿನ ಕೆರೆಗಳನ್ನು ಇಂದು ತ್ಯಾಜ್ಯ ಸುರಿಯಲು, ಕೊಳಚೆ ನೀರು ಹರಿಸಲು ಬಳಸಲಾಗುತ್ತಿದೆ. ಕೆರೆ ಒತ್ತುವರಿ ಸಾಮಾನ್ಯವಾಗಿದೆ. ಕೆರೆಗಳು ಮಲಿನಗೊಂಡಷ್ಟೂ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಕಟ್ಟಿಟ್ಟ ಬುತ್ತಿ. ಅವುಗಳನ್ನು ಸಂರಕ್ಷಿಸಿ, ಪೋಷಿಸಬೇಕಾದ ಅಗತ್ಯವಿದೆ. ಭವಿಷ್ಯದ ಪ್ರಜೆಗಳಾದ ಮಕ್ಕಳಲ್ಲಿ ಈ ಬಗ್ಗೆ ಅರಿವು ಮೂಡಿಸಬೇಕಾಗಿದೆ’ ಎಂದರು.