<p><strong>ಬೆಂಗಳೂರು</strong>: ‘ನಗರದ ನಾಲ್ಕೂ ದಿಕ್ಕಿನಲ್ಲಿ ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆಗೆ ಈಗಿನಿಂದಲೇ ಯೋಜನೆ ರೂಪಿಸುವ ಅಗತ್ಯವಿದೆ’ ಎಂದು ಉದ್ಯಮಿ ಕ್ಯಾಪ್ಟನ್ ಜಿ.ಆರ್.ಗೋಪಿನಾಥ್ ಅಭಿಪ್ರಾಯಪಟ್ಟರು.<br><br>ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇವನಹಳ್ಳಿಯಲ್ಲಿ ಇರುವ ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಒಪ್ಪಂದ ಏಳು ವರ್ಷಗಳಲ್ಲಿ ಮುಕ್ತಾಯವಾಗಲಿದೆ. ಆ ಒಪ್ಪಂದ ಮುಗಿಯುವ ಮುನ್ನವೇ ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆಗೆ ಸರ್ಕಾರ ಪ್ರಯತ್ನಗಳನ್ನು ಚುರುಕುಗೊಳಿಸಬೇಕು’ ಎಂದರು.</p>.<p>‘ಹೆಚ್ಎಎಲ್ ವಿಮಾನ ನಿಲ್ದಾಣವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಅದಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು’ ಎಂದು ಸಲಹೆ ನೀಡಿದರು</p>.<p>‘ಮೈಸೂರಿನ ಮಹಾರಾಜರು ದೂರದೃಷ್ಟಿಯಿಂದ ಜಾಗ ಕೊಟ್ಟು ಆರಂಭಿಸಿದ ಸರ್ಕಾರಿ ವಿಮಾನ ತರಬೇತಿ ಶಾಲೆ ಇಂದು ದುರವಸ್ಥೆಯ ತಾಣವಾಗಿದೆ. ತರಬೇತಿ ಶಾಲೆ ಮುಚ್ಚುವಂತೆ ಕಾಣದ ಕೈಗಳು ಒತ್ತಡ ಹಾಕುತ್ತಿವೆ’ ಎಂದು ತಿಳಿಸಿದರು.</p>.<p>ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ, ವ್ಯವಸ್ಥಾಪಕ ನಿರ್ದೇಶಕಿ ಕೆ.ದೀಪಶ್ರೀ, ನಿರ್ದೇಶಕರು ಉಪಸ್ಥಿತರಿದ್ದರು.</p>.<div><blockquote>ರಕ್ಷಣಾ ವಲಯದ ಸ್ವಾವಲಂಬನೆಯಲ್ಲಿ ಬೇಕಾದಷ್ಟು ಕೆಲಸ ಮಾಡಲು ಬೆಂಗಳೂರು ಅತ್ಯಂತ ಪ್ರಶಸ್ತ ನಗರವಾಗಿದೆ. ಸರ್ಕಾರ ಇಲ್ಲಿ ವಿಮಾನ ತರಬೇತಿ ಶಾಲೆಗಳನ್ನು ಆರಂಭಿಸಬೇಕು. </blockquote><span class="attribution">ಕ್ಯಾ.ಜಿ.ಆರ್.ಗೋಪಿನಾಥ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ನಗರದ ನಾಲ್ಕೂ ದಿಕ್ಕಿನಲ್ಲಿ ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆಗೆ ಈಗಿನಿಂದಲೇ ಯೋಜನೆ ರೂಪಿಸುವ ಅಗತ್ಯವಿದೆ’ ಎಂದು ಉದ್ಯಮಿ ಕ್ಯಾಪ್ಟನ್ ಜಿ.ಆರ್.ಗೋಪಿನಾಥ್ ಅಭಿಪ್ರಾಯಪಟ್ಟರು.<br><br>ಕರ್ನಾಟಕ ರಾಜ್ಯ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯಲ್ಲಿ ಸೋಮವಾರ ಏರ್ಪಡಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇವನಹಳ್ಳಿಯಲ್ಲಿ ಇರುವ ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಒಪ್ಪಂದ ಏಳು ವರ್ಷಗಳಲ್ಲಿ ಮುಕ್ತಾಯವಾಗಲಿದೆ. ಆ ಒಪ್ಪಂದ ಮುಗಿಯುವ ಮುನ್ನವೇ ಹೊಸ ವಿಮಾನ ನಿಲ್ದಾಣಗಳ ಸ್ಥಾಪನೆಗೆ ಸರ್ಕಾರ ಪ್ರಯತ್ನಗಳನ್ನು ಚುರುಕುಗೊಳಿಸಬೇಕು’ ಎಂದರು.</p>.<p>‘ಹೆಚ್ಎಎಲ್ ವಿಮಾನ ನಿಲ್ದಾಣವನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು. ಅದಕ್ಕೆ ಮತ್ತಷ್ಟು ಶಕ್ತಿ ತುಂಬಬೇಕು’ ಎಂದು ಸಲಹೆ ನೀಡಿದರು</p>.<p>‘ಮೈಸೂರಿನ ಮಹಾರಾಜರು ದೂರದೃಷ್ಟಿಯಿಂದ ಜಾಗ ಕೊಟ್ಟು ಆರಂಭಿಸಿದ ಸರ್ಕಾರಿ ವಿಮಾನ ತರಬೇತಿ ಶಾಲೆ ಇಂದು ದುರವಸ್ಥೆಯ ತಾಣವಾಗಿದೆ. ತರಬೇತಿ ಶಾಲೆ ಮುಚ್ಚುವಂತೆ ಕಾಣದ ಕೈಗಳು ಒತ್ತಡ ಹಾಕುತ್ತಿವೆ’ ಎಂದು ತಿಳಿಸಿದರು.</p>.<p>ಮಂಡಳಿಯ ಅಧ್ಯಕ್ಷ ಅಸಗೋಡು ಜಯಸಿಂಹ, ವ್ಯವಸ್ಥಾಪಕ ನಿರ್ದೇಶಕಿ ಕೆ.ದೀಪಶ್ರೀ, ನಿರ್ದೇಶಕರು ಉಪಸ್ಥಿತರಿದ್ದರು.</p>.<div><blockquote>ರಕ್ಷಣಾ ವಲಯದ ಸ್ವಾವಲಂಬನೆಯಲ್ಲಿ ಬೇಕಾದಷ್ಟು ಕೆಲಸ ಮಾಡಲು ಬೆಂಗಳೂರು ಅತ್ಯಂತ ಪ್ರಶಸ್ತ ನಗರವಾಗಿದೆ. ಸರ್ಕಾರ ಇಲ್ಲಿ ವಿಮಾನ ತರಬೇತಿ ಶಾಲೆಗಳನ್ನು ಆರಂಭಿಸಬೇಕು. </blockquote><span class="attribution">ಕ್ಯಾ.ಜಿ.ಆರ್.ಗೋಪಿನಾಥ್</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>