‘ನಾಡಪ್ರಭು ಕೆಂಪೇಗೌಡರು ಚಿಕ್ಕಪೇಟೆಯಿಂದ ನಾಲ್ಕು ದಿಕ್ಕಿಗೆ ನಾಲ್ಕು ಜೋಡಿ ಎತ್ತಿನ ಗಾಡಿಯನ್ನು ತೆಗೆದುಕೊಂಡು ಹೋಗಿದ್ದರು. ಎಲ್ಲ ವೃತ್ತಿ, ಎಲ್ಲಾ ಜನಾಂಗ, ಎಲ್ಲಾ ಧರ್ಮದವರನ್ನೂ ಒಟ್ಟಿಗೆ ಸೇರಿಸಿ ಬೆಂಗಳೂರು ನಗರ ಕಟ್ಟಿದರು. ಪ್ರಪಂಚದ ಎಲ್ಲ ಜನ ಬೆಂಗಳೂರಿನ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ಇದಕ್ಕೆ ಕೆಂಪೇಗೌಡರು ಹಾಕಿಕೊಟ್ಟ ಅಡಿಪಾಯ ಕಾರಣ. ಇದನ್ನು ನಾವು ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು’ ಎಂದು ಹೇಳಿದರು.