<p><strong>ಬೆಂಗಳೂರು</strong>: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವದ ಧಾರ್ಮಿಕ ಚಟುವಟಿಕೆಗಳು ಈಗಾಗಲೇ ಆರಂಭವಾಗಿದ್ದು, ಸೋಮವಾರ ಹಸಿ ಕರಗ ಕಾರ್ಯಕ್ರಮ ನಡೆಯಲಿದೆ. </p>.<p>ತಿಗಳರ ಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಮಹೋತ್ಸವದ ಆರನೇ ದಿನವಾದ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಜೆ ಆರತಿ ಕಾರ್ಯಕ್ರಮ ನಡೆಯಿತು.</p>.<p>ಹಸಿ ಕರಗಕ್ಕಾಗಿಯೇ ಸಾಂಪ್ರದಾಯಿಕವಾಗಿ ನಾನಾ ಪೂಜಾ ವಿಧಾನಗಳನ್ನು ಕೈಗೊಳ್ಳಲಾಗುತ್ತದೆ. ಹಸಿ ಕರಗವು ಸಂಪಂಗಿ ಕೆರೆಯ ಶಕ್ತಿ ಪೀಠದಲ್ಲಿ ಆರಂಭವಾಗಲಿದೆ. ನಂತರ ರಾತ್ರಿಯಿಡೀ ಹಸಿ ಕರಗ ಮೆರವಣಿಗೆ ನಡೆಯಲಿದ್ದು ಬಳಿಕ ಧರ್ಮರಾಯಸ್ವಾಮಿ ದೇವಸ್ಥಾನ ತಲುಪಲಿದೆ.</p>.<p>’ಸಂಪ್ರದಾಯಂತೆಯೇ ಧಾರ್ಮಿಕ ಆಚರಣೆಗಳನ್ನು ಸಂಪಂಗಿ ಕೆರೆಯಲ್ಲಿರುವ ಶಕ್ತಿ ಪೀಠದಲ್ಲಿ ಆರಂಭಿಸಲಾಗುತ್ತದೆ. ಅಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಸಿದ್ದತೆಗಳು ಆರಂಭಗೊಳ್ಳಲಿದ್ದು ಸಂಜೆ ಹೊತ್ತಿಗೆ ವೀರಕುಮಾರರು ಆಗಮಿಸಲಿದ್ದಾರೆ. ವಿಶೇಷ ಪೂಜೆಗಳ ನಂತರ ಹಸಿ ಕರಗವನ್ನು ಅಣಿಗೊಳಿಸಲಾಗುತ್ತದೆ.</p>.<p>‘ವಿಶೇಷ ಹೂವಿನ ಅಲಂಕಾರ, ವೇಷಭೂಷಣಗಳೊಂದಿಗೆ ಅರ್ಚಕ ಎ. ಜ್ಞಾನೇಶ್ ಕುಮಾರ್ ಅವರು ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಹಸಿ ಕರಗವನ್ನು ಹಿಡಿದು ಸಂಪಂಗಿ ಕೆರೆಯಿಂದ ಜಿಬಿಎ ಆವರಣದಲ್ಲಿರುವ ಆದಿಶಕ್ತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಾಗುತ್ತದೆ. ಆ ನಂತರ ಧರ್ಮರಾಮಸ್ವಾಮಿ ದೇವಸ್ಥಾನದತ್ತ ತೆರಳಿ ಅಲ್ಲಿ ಸಂಪನ್ನಗೊಳ್ಳಲಿದೆ’ ಎಂದು ಧರ್ಮರಾಯಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ತಿಳಿಸಿದ್ದಾರೆ.</p>.<p>ಮಂಗಳವಾರ ಪೊಂಗಲ್ ಸೇವೆ, ಬುಧವಾರ ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವದ ಧಾರ್ಮಿಕ ಚಟುವಟಿಕೆಗಳು ಈಗಾಗಲೇ ಆರಂಭವಾಗಿದ್ದು, ಸೋಮವಾರ ಹಸಿ ಕರಗ ಕಾರ್ಯಕ್ರಮ ನಡೆಯಲಿದೆ. </p>.<p>ತಿಗಳರ ಪೇಟೆಯ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕರಗ ಮಹೋತ್ಸವದ ಆರನೇ ದಿನವಾದ ಭಾನುವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಜೆ ಆರತಿ ಕಾರ್ಯಕ್ರಮ ನಡೆಯಿತು.</p>.<p>ಹಸಿ ಕರಗಕ್ಕಾಗಿಯೇ ಸಾಂಪ್ರದಾಯಿಕವಾಗಿ ನಾನಾ ಪೂಜಾ ವಿಧಾನಗಳನ್ನು ಕೈಗೊಳ್ಳಲಾಗುತ್ತದೆ. ಹಸಿ ಕರಗವು ಸಂಪಂಗಿ ಕೆರೆಯ ಶಕ್ತಿ ಪೀಠದಲ್ಲಿ ಆರಂಭವಾಗಲಿದೆ. ನಂತರ ರಾತ್ರಿಯಿಡೀ ಹಸಿ ಕರಗ ಮೆರವಣಿಗೆ ನಡೆಯಲಿದ್ದು ಬಳಿಕ ಧರ್ಮರಾಯಸ್ವಾಮಿ ದೇವಸ್ಥಾನ ತಲುಪಲಿದೆ.</p>.<p>’ಸಂಪ್ರದಾಯಂತೆಯೇ ಧಾರ್ಮಿಕ ಆಚರಣೆಗಳನ್ನು ಸಂಪಂಗಿ ಕೆರೆಯಲ್ಲಿರುವ ಶಕ್ತಿ ಪೀಠದಲ್ಲಿ ಆರಂಭಿಸಲಾಗುತ್ತದೆ. ಅಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ಸಿದ್ದತೆಗಳು ಆರಂಭಗೊಳ್ಳಲಿದ್ದು ಸಂಜೆ ಹೊತ್ತಿಗೆ ವೀರಕುಮಾರರು ಆಗಮಿಸಲಿದ್ದಾರೆ. ವಿಶೇಷ ಪೂಜೆಗಳ ನಂತರ ಹಸಿ ಕರಗವನ್ನು ಅಣಿಗೊಳಿಸಲಾಗುತ್ತದೆ.</p>.<p>‘ವಿಶೇಷ ಹೂವಿನ ಅಲಂಕಾರ, ವೇಷಭೂಷಣಗಳೊಂದಿಗೆ ಅರ್ಚಕ ಎ. ಜ್ಞಾನೇಶ್ ಕುಮಾರ್ ಅವರು ಒಂದು ಕೈಯಲ್ಲಿ ಕತ್ತಿ, ಮತ್ತೊಂದು ಕೈಯಲ್ಲಿ ಹಸಿ ಕರಗವನ್ನು ಹಿಡಿದು ಸಂಪಂಗಿ ಕೆರೆಯಿಂದ ಜಿಬಿಎ ಆವರಣದಲ್ಲಿರುವ ಆದಿಶಕ್ತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಲಾಗುತ್ತದೆ. ಆ ನಂತರ ಧರ್ಮರಾಮಸ್ವಾಮಿ ದೇವಸ್ಥಾನದತ್ತ ತೆರಳಿ ಅಲ್ಲಿ ಸಂಪನ್ನಗೊಳ್ಳಲಿದೆ’ ಎಂದು ಧರ್ಮರಾಯಸ್ವಾಮಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಲಕರಿ ನಾರಾಯಣಸ್ವಾಮಿ ತಿಳಿಸಿದ್ದಾರೆ.</p>.<p>ಮಂಗಳವಾರ ಪೊಂಗಲ್ ಸೇವೆ, ಬುಧವಾರ ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ಮಹಾರಥೋತ್ಸವ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>