ಈ ದೂರಿಗೆ ಸಂಬಂಧಿಸಿದಂತೆ ಇಲಾಖೆಯ ಜಾಗೃತಕೋಶದ ಮುಖ್ಯ ಜಾಗೃತಾಧಿಕಾರಿ ತನಿಖೆ ನಡೆಸಿ, ವರದಿ ಸಲ್ಲಿಸಿದ್ದಾರೆ. ವಾಣಿ ಅವರು ಅನುಕಂಪದ ಆಧಾರದ ಮೇಲೆ ಪಡೆದಿರುವ ನೇಮಕಾತಿಯಲ್ಲಿ ಕರ್ನಾಟಕ ನಾಗರಿಕ ಸೇವಾ (ಅನುಕಂಪದ ಆಧಾರಿತ ನೇಮಕಾತಿ) ನಿಯಮಗಳನ್ನು ಪಾಲಿಸಿಲ್ಲ. ಇಲಾಖೆಗೆ ಸುಳ್ಳು ಆದಾಯ ದೃಢೀಕರಣ ಮಾಹಿತಿ ನೀಡಿರುತ್ತಾರೆ. ಸತ್ಯವನ್ನು ಮರೆಮಾಚಿ, ಸರ್ಕಾರಕ್ಕೆ ವಂಚಿಸಿ ನೇಮಕಗೊಂಡಿರುವುದು ಲಭ್ಯ ದಾಖಲೆಗಳು ಮತ್ತು ಸಾಕ್ಷ್ಯಗಳಿಂದ ಸಾಬೀತಾಗಿರುತ್ತದೆ ಎಂದು ವರದಿಯಲ್ಲಿ ತಿಳಿಸಿ, ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿರುತ್ತಾರೆ ಎಂದು ರಂದೀಪ್ ಆದೇಶದಲ್ಲಿ ತಿಳಿಸಿದ್ದಾರೆ.