ಹಿಂದೂಸ್ಥಾನಿ ಸಂಗೀತ, ಯಕ್ಷಗಾನ ತಾಳಮದ್ದಳೆಯಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಜನರನ್ನು ರಂಜಿಸಿತು. ನಗರದ ವಿವಿಧೆಡೆಯಿಂದ ಬಂದ ಸಾಹಿತ್ಯಾಸಕ್ತರು, ಬೆಳಿಗ್ಗೆಯಿಂದ ಸಂಜೆಯವರೆಗೆ ಉತ್ಸಾಹದಿಂದ ಗಹನವಾದ ಚರ್ಚೆಗಳನ್ನು ಆಲಿಸಿದರು. ದೇಶದ ವಿವಿಧೆಡೆಗಳಿಂದ ಬಂದಿದ್ದ ವಿದ್ವಾಂಸರು, ಲೇಖಕರು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರು ಹಂಚಿಕೊಂಡ ಹೊಳಹುಗಳ ಬೆಳಕಿನೊಂದಿಗೆ ಈ ಉತ್ಸವ ಕಳೆಗಟ್ಟಿತು. ತಮ್ಮಿಷ್ಟದ ಸಾಹಿತಿಗಳ ಮಾತುಗಳನ್ನು ಆಲಿಸಿದ ಅಭಿಮಾನಿ ಬಳಗ, ಪುಸ್ತಕಗಳಿಗೆ ಅವರ ಹಸ್ತಾಕ್ಷರಗಳನ್ನು ಪಡೆದುಕೊಂಡಿತು.