<p><strong>ಬೆಂಗಳೂರು</strong>: ‘ಕಾಂಡೋಮ್ ಬಳಸಿ ಎಂದು ಮನವಿ ಮಾಡುವ ಲೈಂಗಿಕ ಕಾರ್ಯಕರ್ತೆಯರನ್ನು ದೈಹಿಕವಾಗಿ ಹಿಂಸಿಸಲಾಗುತ್ತದೆ. ಈ ದೃಷ್ಟಿಕೋನದಿಂದಲೂ ಅವರ ಜಗತ್ತನ್ನು ಅರಿಯುವ ಪ್ರಯತ್ನ ಮಾಡಬೇಕಿದೆ’ ಎಂದು ಲೇಖಕ ಅಶೋಕ್ ಅಲೆಕ್ಸಾಂಡರ್ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾನುವಾರ ತಮ್ಮ ‘ಎ ಸ್ಟ್ರೇಂಜರ್ ಟ್ರುಥ್– ಲೆಸೆನ್ಸ್ ಇನ್ ಲವ್, ಲೀಡರ್ಶಿಪ್ ಆ್ಯಂಡ್ ಕರೇಜ್ ಫ್ರಂ ಇಂಡಿಯಾ ಸೆಕ್ಸ್ ವರ್ಕರ್ಸ್’ ಪುಸ್ತಕ ಕುರಿತ ಸಂವಾದದಲ್ಲಿ ಮಾತನಾಡಿದರು.</p>.<p>‘ಅವಹಾನ್ ಪ್ರತಿಷ್ಠಾನದ ಮೂಲಕಲೈಂಗಿಕ ಕಾರ್ಯಕರ್ತೆಯರನ್ನು ಮಾತನಾಡಿಸಿದಾಗ, ತುಂಬಾ ತಿಳಿದುಕೊಂಡಿದ್ದೇನೆಂಬ ಅಹಂ ಮಾಯವಾಗಿ, ತಿಳಿದುಕೊಂಡ ಅನೇಕ ಸಂಗತಿಗಳನ್ನು ತಿದ್ದಿಕೊಂಡಿದ್ದೇನೆ. ಈ ಪುಸ್ತಕದ ಆರಂಭದ ಕೆಲವು ಪುಟಗಳು ಪ್ರತಿಷ್ಠಾನದೊಂದಿಗೆ ಸಂಪರ್ಕಕ್ಕೆ ಬಂದ ಒಟ್ಟಂದದ ಅನುಭವಗಳಿಗೆ ಮೀಸಲಾಗಿದೆ’ ಎಂದರು.</p>.<p>‘ಲೈಂಗಿಕ ಕಾರ್ಯಕರ್ತೆಯರಿಗೆ ಗೌರವ ನೀಡುವ, ಸೌಜನ್ಯದಿಂದ ನಡೆಸಿಕೊಳ್ಳುವ ಉದಾರತೆಯನ್ನು ಸಮಾಜ ರೂಢಿಸಿಕೊಳ್ಳಬೇಕಿದೆ. ಈ ವಿಚಾರದಲ್ಲಿ ನಾವಿನ್ನೂ ಹಿಂದೆ ಉಳಿದಿದ್ದೇವೆ ಎನ್ನಲು ವಿಷಾದವೆನಿಸುತ್ತದೆ’ ಎಂದು ಹೇಳಿದರು. ‘ಈ ಸಮುದಾಯದಲ್ಲಿ ಆರೋಗ್ಯ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕಾಂಡೋಮ್ ಬಳಸಿ ಎಂದು ಮನವಿ ಮಾಡುವ ಲೈಂಗಿಕ ಕಾರ್ಯಕರ್ತೆಯರನ್ನು ದೈಹಿಕವಾಗಿ ಹಿಂಸಿಸಲಾಗುತ್ತದೆ. ಈ ದೃಷ್ಟಿಕೋನದಿಂದಲೂ ಅವರ ಜಗತ್ತನ್ನು ಅರಿಯುವ ಪ್ರಯತ್ನ ಮಾಡಬೇಕಿದೆ’ ಎಂದು ಲೇಖಕ ಅಶೋಕ್ ಅಲೆಕ್ಸಾಂಡರ್ ಅಭಿಪ್ರಾಯಪಟ್ಟರು.</p>.<p>ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಭಾನುವಾರ ತಮ್ಮ ‘ಎ ಸ್ಟ್ರೇಂಜರ್ ಟ್ರುಥ್– ಲೆಸೆನ್ಸ್ ಇನ್ ಲವ್, ಲೀಡರ್ಶಿಪ್ ಆ್ಯಂಡ್ ಕರೇಜ್ ಫ್ರಂ ಇಂಡಿಯಾ ಸೆಕ್ಸ್ ವರ್ಕರ್ಸ್’ ಪುಸ್ತಕ ಕುರಿತ ಸಂವಾದದಲ್ಲಿ ಮಾತನಾಡಿದರು.</p>.<p>‘ಅವಹಾನ್ ಪ್ರತಿಷ್ಠಾನದ ಮೂಲಕಲೈಂಗಿಕ ಕಾರ್ಯಕರ್ತೆಯರನ್ನು ಮಾತನಾಡಿಸಿದಾಗ, ತುಂಬಾ ತಿಳಿದುಕೊಂಡಿದ್ದೇನೆಂಬ ಅಹಂ ಮಾಯವಾಗಿ, ತಿಳಿದುಕೊಂಡ ಅನೇಕ ಸಂಗತಿಗಳನ್ನು ತಿದ್ದಿಕೊಂಡಿದ್ದೇನೆ. ಈ ಪುಸ್ತಕದ ಆರಂಭದ ಕೆಲವು ಪುಟಗಳು ಪ್ರತಿಷ್ಠಾನದೊಂದಿಗೆ ಸಂಪರ್ಕಕ್ಕೆ ಬಂದ ಒಟ್ಟಂದದ ಅನುಭವಗಳಿಗೆ ಮೀಸಲಾಗಿದೆ’ ಎಂದರು.</p>.<p>‘ಲೈಂಗಿಕ ಕಾರ್ಯಕರ್ತೆಯರಿಗೆ ಗೌರವ ನೀಡುವ, ಸೌಜನ್ಯದಿಂದ ನಡೆಸಿಕೊಳ್ಳುವ ಉದಾರತೆಯನ್ನು ಸಮಾಜ ರೂಢಿಸಿಕೊಳ್ಳಬೇಕಿದೆ. ಈ ವಿಚಾರದಲ್ಲಿ ನಾವಿನ್ನೂ ಹಿಂದೆ ಉಳಿದಿದ್ದೇವೆ ಎನ್ನಲು ವಿಷಾದವೆನಿಸುತ್ತದೆ’ ಎಂದು ಹೇಳಿದರು. ‘ಈ ಸಮುದಾಯದಲ್ಲಿ ಆರೋಗ್ಯ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕು’ ಎಂದು ಅಭಿಪ್ರಾಯಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>