‘ಈಶಾನ್ಯ ರಾಜ್ಯಗಳು, ಪಂಜಾಬ್ ಮತ್ತು ಕಾಶ್ಮೀರದ ಅಭಿವೃದ್ಧಿಗೂ ಗೌಡರು ಪ್ರಧಾನಿಯಾಗಿದ್ದಾಗ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು, 'ಕಾಶ್ಮೀರದ ಜನರು ನಂಬಿದ್ದ ಏಕೈಕ ಪ್ರಧಾನಿ ದೇವೇಗೌಡರು’ ಎಂದು ಹೇಳಿದ್ದು ಈ ಕಾರಣಕ್ಕಾಗಿಯೇ’ ಎಂಬುದನ್ನೂ ಸುಗತ ಅವರು ಸ್ಮರಿಸಿದರು.