ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ಎಂ. ಕೃಷ್ಣಗೆ ‘ಬಿಎಂಎ ಜೀವಮಾನ ಸಾಧನೆ ಪ್ರಶಸ್ತಿ’

Published 27 ಜುಲೈ 2023, 15:23 IST
Last Updated 27 ಜುಲೈ 2023, 15:23 IST
ಅಕ್ಷರ ಗಾತ್ರ

ಬೆಂಗಳೂರು: ‘ಬೆಂಗಳೂರು ಮ್ಯಾನೇಜ್‌ಮೆಂಟ್‌ ಅಸೋಸಿಯೇಷನ್‌ನಿಂದ (ಬಿಎಂಎ) ನೀಡುವ ಜೀವಮಾನ ಸಾಧನೆ ಪ್ರಶಸ್ತಿಗೆ ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ಆಯ್ಕೆಯಾಗಿದ್ದಾರೆ’ ಎಂದು ಅಸೋಸಿಯೇಷನ್‌ ಅಧ್ಯಕ್ಷ ಕೆ.ಎನ್. ನಾರಾಯಣಸ್ವಾಮಿ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜುಲೈ 29ರಂದು ದಿ ಚಾನ್ಸರಿ ಪೆವಿಲಿಯನ್‌ ಹೋಟೆಲ್‌ನಲ್ಲಿ ನಡೆಯುವ ಬಿಎಂಎ 66ನೇ ವಾರ್ಷಿಕ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ತಿಳಿಸಿದರು.

‘ಭಾರತೀಯ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಸಂಸ್ಥೆಗಳ ಒಕ್ಕೂಟ (ಎಫ್‌ಐಸಿಸಿಐ) ಅಧ್ಯಕ್ಷ ಕೆ. ಉಲ್ಲಾಸ್‌ ಕಾಮತ್‌ ಅವರಿಗೆ ‘ಬಿಎಂಎ ಅವಾರ್ಡ್‌ ಆಫ್‌ ಎಕ್ಸಲೆನ್ಸ್‌’ ಪ್ರದಾನ ಮಾಡಲಾಗುತ್ತದೆ. ಉದ್ಯಮಿ ಸಮರ್ಥ ರಾಘವ ನಾಗಭೂಷಣಂ, ಸಿಎಂಆರ್ ವಿಶ್ವವಿದ್ಯಾಲಯದ ಕುಲಪತಿ ಸಬಿತಾ ರಾಮಮೂರ್ತಿ, ಸೇಂಟ್‌ ಜೋಸೆಫ್‌ ಕಾಲೇಜಿನ ಫಾದರ್‌ ವಿಕ್ಟರ್‌ ಲೋಬೋ, ಪ್ಯಾರಾ ಒಲಂಪಿಯನ್ ಎಚ್.ಎನ್. ಗಿರೀಶ್, ಆರ್‌.ವಿ. ವಿಶ್ವವಿದ್ಯಾಲಯ ಉಪಕುಲಪತಿ ವೈ.ಎಸ್.ಆರ್ ಮೂರ್ತಿ, ಕಂಬಳ ಶ್ರೀನಿವಾಸ್, ಎಫ್‌ಕೆಸಿಸಿಐ ನಿಕಟಪೂರ್ವ ಅಧ್ಯಕ್ಷ ಐ.ಎಸ್. ಪ್ರಸಾದ್ ಅವರಿಗೆ ‘ಬಿಎಂಎ ಸಾಧಕ ಪ್ರಶಸ್ತಿಗಳನ್ನು’ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT