<p><strong>ಬೆಂಗಳೂರು</strong>: ಪೊಲೀಸರ ಸೋಗಿನಲ್ಲಿ ಪೇಯಿಂಗ್ ಗೆಸ್ಟ್ಗೆ (ಪಿ.ಜಿ) ನುಗ್ಗಿ, ಮೊಬೈಲ್ ಸುಲಿಗೆ ಮಾಡಿದ ಆರು ಆರೋಪಿಗಳನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕೇರಳದ ಮುಹಮ್ಮದ್ ನಜಾಶ್ (24), ಸರುಣ್ (38) ಹಾಗೂ ನಗರದ ನಿವಾಸಿಗಳಾದ ವಿಷ್ಣು ಕೆ.ಟಿ (23), ದಿವಾಕರ್ (34), ಮಧುಕುಮಾರ್ (32), ಕಿರಣ್ (29) ಬಂಧಿತ ಆರೋಪಿಗಳು.</p>.<p>ನವೆಂಬರ್ 7ರಂದು ರಾತ್ರಿ ಮಾರತ್ ಹಳ್ಳಿಯ ಪಿ.ಜಿಗೆ ನುಗ್ಗಿದ್ದ ಆರೋಪಿಗಳು, ಯುವತಿಯರ ಬಳಿಯಿದ್ದ ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು.</p>.<p>‘ದೂರುದಾರ ಯುವತಿಗೆ ಟೀ ಅಂಗಡಿಯೊಂದರಲ್ಲಿ ಮುಹಮ್ಮದ್ ನಜಾಶ್ ಪರಿಚಯವಾಗಿತ್ತು. ಬಳಿಕ ಸಲುಗೆ ಬೆಳೆದ ಕಾರಣ ಯುವತಿ ನಜಾಶ್ ಜನ್ಮದಿನ ಆಚರಿಸಲು ತನ್ನ ಪಿ.ಜಿ.ಗೆ ಆಹ್ವಾನಿಸಿದ್ದಳು. ಈ ವೇಳೆ, ಆರೋಪಿ ತನ್ನ ಸ್ಹೇಹಿತನ ಜತೆ ತೆರಳಿದ್ದ. ಮಧ್ಯರಾತ್ರಿ 2 ಗಂಟೆಗೆ 4–5 ಆರೋಪಿಗಳು ಪಿ.ಜಿ. ಬಾಗಿಲು ತಟ್ಟಿದ್ದರು. ಬಾಗಿಲು ತೆರೆಯುತ್ತಿದ್ದಂತೆ ತಾವು ಪೊಲೀಸರು ಎಂದು ಹೇಳಿ, ಗಾಂಜಾ ಇದೆಯೇ ಎಂದು ಬೆದರಿಸಿ, ತಪಾಸಣೆ ಮಾಡಿದ್ದರು. ಯುವತಿಯರ ಬಳಿಯಿದ್ದ ಎರಡು ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡಿದ್ದರು. ಬಳಿಕ ₹5 ಲಕ್ಷ ನಗದು ನೀಡದಿದ್ದರೆ ಮತ್ತೊಮ್ಮೆ ಬರುವುದಾಗಿ ಬೆದರಿಸಿ ಪರಾರಿಯಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆಯ ಬಳಿಕ ಯುವತಿ ಎಚ್ಎಎಲ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಕೃತ್ಯದಲ್ಲಿ ಯುವತಿಯ ಪರಿಚಿತ ನಜಾಶ್ನ ಕೈವಾಡ ಇರುವುದು ಗೊತ್ತಾಗಿದೆ. ಹಣಕ್ಕಾಗಿ ಕೃತ್ಯವೆಸಗಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.</p>.<p>ಆರೋಪಿಗಳ ಪೈಕಿ ಸರುಣ್ ಹಿಂದೆ ಮಧುಬಲೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಪೊಲೀಸರ ಸೋಗಿನಲ್ಲಿ ಪೇಯಿಂಗ್ ಗೆಸ್ಟ್ಗೆ (ಪಿ.ಜಿ) ನುಗ್ಗಿ, ಮೊಬೈಲ್ ಸುಲಿಗೆ ಮಾಡಿದ ಆರು ಆರೋಪಿಗಳನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.</p>.<p>ಕೇರಳದ ಮುಹಮ್ಮದ್ ನಜಾಶ್ (24), ಸರುಣ್ (38) ಹಾಗೂ ನಗರದ ನಿವಾಸಿಗಳಾದ ವಿಷ್ಣು ಕೆ.ಟಿ (23), ದಿವಾಕರ್ (34), ಮಧುಕುಮಾರ್ (32), ಕಿರಣ್ (29) ಬಂಧಿತ ಆರೋಪಿಗಳು.</p>.<p>ನವೆಂಬರ್ 7ರಂದು ರಾತ್ರಿ ಮಾರತ್ ಹಳ್ಳಿಯ ಪಿ.ಜಿಗೆ ನುಗ್ಗಿದ್ದ ಆರೋಪಿಗಳು, ಯುವತಿಯರ ಬಳಿಯಿದ್ದ ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡು ಪರಾರಿಯಾಗಿದ್ದರು.</p>.<p>‘ದೂರುದಾರ ಯುವತಿಗೆ ಟೀ ಅಂಗಡಿಯೊಂದರಲ್ಲಿ ಮುಹಮ್ಮದ್ ನಜಾಶ್ ಪರಿಚಯವಾಗಿತ್ತು. ಬಳಿಕ ಸಲುಗೆ ಬೆಳೆದ ಕಾರಣ ಯುವತಿ ನಜಾಶ್ ಜನ್ಮದಿನ ಆಚರಿಸಲು ತನ್ನ ಪಿ.ಜಿ.ಗೆ ಆಹ್ವಾನಿಸಿದ್ದಳು. ಈ ವೇಳೆ, ಆರೋಪಿ ತನ್ನ ಸ್ಹೇಹಿತನ ಜತೆ ತೆರಳಿದ್ದ. ಮಧ್ಯರಾತ್ರಿ 2 ಗಂಟೆಗೆ 4–5 ಆರೋಪಿಗಳು ಪಿ.ಜಿ. ಬಾಗಿಲು ತಟ್ಟಿದ್ದರು. ಬಾಗಿಲು ತೆರೆಯುತ್ತಿದ್ದಂತೆ ತಾವು ಪೊಲೀಸರು ಎಂದು ಹೇಳಿ, ಗಾಂಜಾ ಇದೆಯೇ ಎಂದು ಬೆದರಿಸಿ, ತಪಾಸಣೆ ಮಾಡಿದ್ದರು. ಯುವತಿಯರ ಬಳಿಯಿದ್ದ ಎರಡು ಮೊಬೈಲ್ ಫೋನ್ಗಳನ್ನು ಕಿತ್ತುಕೊಂಡಿದ್ದರು. ಬಳಿಕ ₹5 ಲಕ್ಷ ನಗದು ನೀಡದಿದ್ದರೆ ಮತ್ತೊಮ್ಮೆ ಬರುವುದಾಗಿ ಬೆದರಿಸಿ ಪರಾರಿಯಾಗಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಘಟನೆಯ ಬಳಿಕ ಯುವತಿ ಎಚ್ಎಎಲ್ ಠಾಣೆಗೆ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ, ಕೃತ್ಯದಲ್ಲಿ ಯುವತಿಯ ಪರಿಚಿತ ನಜಾಶ್ನ ಕೈವಾಡ ಇರುವುದು ಗೊತ್ತಾಗಿದೆ. ಹಣಕ್ಕಾಗಿ ಕೃತ್ಯವೆಸಗಿರುವುದಾಗಿ ಆರೋಪಿಗಳು ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ.</p>.<p>ಆರೋಪಿಗಳ ಪೈಕಿ ಸರುಣ್ ಹಿಂದೆ ಮಧುಬಲೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>