‘ನಂದಿನಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಲಾರಿ ಚಾಲಕರೊಬ್ಬರನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳ ತಂಡ, ಚಾಕುವಿನಿಂದ ಇರಿದು ಹಲ್ಲೆ ಮಾಡಿತ್ತು. ಚಾಲಕರ ಬಳಿ ಇದ್ದ ₹30,000 ನಗದು ಹಾಗೂ ಮೊಬೈಲ್ ಸುಲಿಗೆ ಮಾಡಿ ಪರಾರಿಯಾಗಿತ್ತು. ಲಾರಿ ಚಾಲಕ ನೀಡಿದ್ದ ದೂರು ಆಧರಿಸಿ ಆರೋಪಿ ಅನ್ವರ್ ಎಂಬುವರನ್ನು ಬಂಧಿಸಲಾಗಿತ್ತು. ಅವರು ನೀಡಿದ್ದ ಮಾಹಿತಿಯಂತೆ ಅನುಬನ್ ಹಾಗೂ ಇತರೆ ಆರೋಪಿಗಳ ಪತ್ತೆಗೆ ಹುಡುಕಾಟ ನಡೆದಿತ್ತು’ ಎಂದೂ ಅವರು ಹೇಳಿದರು.