'ಭಾನುವಾರ ನಸುಕಿನಲ್ಲಿ ಲಗ್ಗೆರೆ ಸೇತುವೆ ಬಳಿ ರೌಡಿ ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ಮಾಹಿತಿ ಸಿಕ್ಕಿತ್ತು. ಸ್ಥಳಕ್ಕೆ ಹೋಗಿದ್ದ ಪೊಲೀಸರು, ಶರಣಾಗುವಂತೆ ಹೇಳಿದ್ದರು. ಆದರೆ, ರೌಡಿ ಹಾಗೂ ಆತನ ಸಹಚರ, ದ್ವಿಚಕ್ರ ವಾಹನವನ್ನು ವೇಗವಾಗಿ ಚಲಾಯಿಸಿಕೊಂಡು ಹೊರಟಿದ್ದರು. ಪೊಲೀಸರು ಬೆನ್ನಟ್ಟಿದ್ದರು. ಮಾರ್ಗಮಧ್ಯೆಯೇ ಕಾನ್ಸ್ಟೆಬಲ್ ಬಸವಣ್ಣ ರೌಡಿಯನ್ನು ಹಿಡಿದುಕೊಳ್ಳಲು ಮುಂದಾಗಿದ್ದರು. ಅದೇ ಸಂದರ್ಭದಲ್ಲೇ ರೌಡಿಯ ಸಹಚರ ದಾಸ್, ಕಾನ್ಸ್ಟೆಬಲ್ ಅವರ ಕೈಗೆ ಚಾಕುವಿನಿಂದ ಇರಿದಿದ್ದ. ರೌಡಿ ಸಹ ದಾಳಿ ಮಾಡಲು ಮುಂದಾಗಿದ್ದ. ಅವಾಗಲೇ ಪಿಎಸ್ಐ , ರೌಡಿಯ ಬಲಗಾಲಿಗೆ ಗುಂಡು ಹಾರಿಸಿದ್ದರು. ಸ್ಥಳದಲ್ಲೇ ಕುಸಿದು ಬಿದ್ದಿದ್ದ ರೌಡಿಯನ್ನು ಪೊಲೀಸರೇ ಆಸ್ಪತ್ರೆಗೆ ಸೇರಿಸಿದ್ದಾರೆ. ಕಾನ್ಸ್ಟೆಬಲ್ ಸಹ ಚಿಕಿತ್ಸೆ ಪಡೆಯುತ್ತಿದ್ದಾರೆ' ಎಂದೂ ಅವರು ತಿಳಿಸಿದರು.