<p><strong>ಬೆಂಗಳೂರು: </strong>ನಗರದ ಆಗ್ನೇಯ ವಿಭಾಗ ವ್ಯಾಪ್ತಿಯಲ್ಲಿ ವಾಸವಿರುವ ರೌಡಿಗಳ ಮನೆ ಮೇಲೆ ಪೊಲೀಸರು ಶುಕ್ರವಾರ ನಸುಕಿನಲ್ಲಿ ದಾಳಿ ಮಾಡಿದ್ದು, 18 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>‘ಹಲವು ಅಪರಾದ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿಗೂ ಹೋಗಿಬಂದಿದ್ದ ರೌಡಿಗಳು, ತಮ್ಮದೇ ತಂಡ ಕಟ್ಟಿಕೊಂಡು ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದರು. ಅಪರಾಧ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ 63 ರೌಡಿಗಳ ಮನೆ ಮೇಲೆ ದಾಳಿ ಮಾಡಲಾಗಿದೆ’ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ರೌಡಿಗಳಾದ ಸುರೇಶ್ ಅಲಿಯಾಸ್ ಮರ್ಡರ್, ಕಿಶೋರ್ ಅಲಿಯಾಸ್ ಪುಣೆ, ಅತಾವುಲ್ಲಾ, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ, ಗೆಜ್ಜೆ ವೆಂಕಟೇಶ್, ಸುಜಿತ್, ಆನಂದ್, ಗೌತಮ್, ಮಣಿಕಂಠ್, ತೇಜಸ್, ಅಂಬರೀಷ್ ಸೇರಿದಂತೆ ಹಲವರ ಮನೆ ಮೇಲೆ ದಾಳಿ ಆಗಿದೆ. ಈ ಪೈಕಿ 18 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಆಗ್ನೇಯ ವಿಭಾಗ ವ್ಯಾಪ್ತಿಯಲ್ಲಿ ವಾಸವಿರುವ ರೌಡಿಗಳ ಮನೆ ಮೇಲೆ ಪೊಲೀಸರು ಶುಕ್ರವಾರ ನಸುಕಿನಲ್ಲಿ ದಾಳಿ ಮಾಡಿದ್ದು, 18 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>‘ಹಲವು ಅಪರಾದ ಕೃತ್ಯಗಳಲ್ಲಿ ಭಾಗಿಯಾಗಿ ಜೈಲಿಗೂ ಹೋಗಿಬಂದಿದ್ದ ರೌಡಿಗಳು, ತಮ್ಮದೇ ತಂಡ ಕಟ್ಟಿಕೊಂಡು ಸಾರ್ವಜನಿಕರಲ್ಲಿ ಭಯವನ್ನುಂಟು ಮಾಡುತ್ತಿದ್ದರು. ಅಪರಾಧ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ 63 ರೌಡಿಗಳ ಮನೆ ಮೇಲೆ ದಾಳಿ ಮಾಡಲಾಗಿದೆ’ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಷಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ರೌಡಿಗಳಾದ ಸುರೇಶ್ ಅಲಿಯಾಸ್ ಮರ್ಡರ್, ಕಿಶೋರ್ ಅಲಿಯಾಸ್ ಪುಣೆ, ಅತಾವುಲ್ಲಾ, ಆನಂದ್ ಅಲಿಯಾಸ್ ಬ್ರಿಡ್ಜ್, ಶಿವ ಅಲಿಯಾಸ್ ಹಂದಿ, ಗೆಜ್ಜೆ ವೆಂಕಟೇಶ್, ಸುಜಿತ್, ಆನಂದ್, ಗೌತಮ್, ಮಣಿಕಂಠ್, ತೇಜಸ್, ಅಂಬರೀಷ್ ಸೇರಿದಂತೆ ಹಲವರ ಮನೆ ಮೇಲೆ ದಾಳಿ ಆಗಿದೆ. ಈ ಪೈಕಿ 18 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>