<p><strong>ಬೆಂಗಳೂರು</strong>: ಕಟ್ಟಡವೊಂದರ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಬಾಲಕಿ ಬೆಂಗಳೂರು ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾಳೆ.</p><p>ಗುರುವಾರ ಮಧ್ಯಾಹ್ನ ಪಶ್ಚಿಮ ವಿಭಾಗದ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಆರ್ಐ ಲೇಔಟ್ನ ಅಪಾರ್ಟ್ಮೆಂಟ್ ಒಂದರ ಐದನೇ ಮಹಡಿಯ ಮೇಲೆ ನಿಂತು ‘ನಾನು ಸಾಯುತ್ತೇನೆ‘ ಎಂದು 16 ವಯಸ್ಸಿನ ಬಾಲಕಿ ಚೀರುತ್ತಿದ್ದಳು.</p><p>ಇದನ್ನು ಗಮನಿಸಿದ ಸಾರ್ವಜನಿಕರು 112ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಇಲಾಖೆಯವರು ಉಪಾಯ ಮಾಡಿ ಬಾಲಕಿಯನ್ನು ರಕ್ಷಿಸಿದ್ದಾರೆ.</p><p>ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಪಶ್ಚಿಮ ವಿಭಾಗದ ಪೊಲೀಸರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.</p><p>ಸದ್ಯ ಬಾಲಕಿಯನ್ನು ನಿಹ್ಹ್ಯಾನ್ಸ್ನ ಮಾನಸಿಕ ಸಲಹಾ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p><p>ಆತ್ಮಹತ್ಯೆ ಯತ್ನ ಸಂದರ್ಭದಲ್ಲಿ ಸಂತ್ರಸ್ತರು ಅಥವಾ ಅವರ ಸ್ನೇಹಿತರು, ಸಂಬಂಧಿಗಳು 14416 ಅಥವಾ 1-800-891-4416 24X7 ಉಚಿತ ಸಹಾಯವಾಣಿಯನ್ನು ಸಂಪರ್ಕಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಟ್ಟಡವೊಂದರ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಬಾಲಕಿ ಬೆಂಗಳೂರು ಪೊಲೀಸರ ಸಮಯಪ್ರಜ್ಞೆಯಿಂದ ಬದುಕುಳಿದಿದ್ದಾಳೆ.</p><p>ಗುರುವಾರ ಮಧ್ಯಾಹ್ನ ಪಶ್ಚಿಮ ವಿಭಾಗದ ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್ಆರ್ಐ ಲೇಔಟ್ನ ಅಪಾರ್ಟ್ಮೆಂಟ್ ಒಂದರ ಐದನೇ ಮಹಡಿಯ ಮೇಲೆ ನಿಂತು ‘ನಾನು ಸಾಯುತ್ತೇನೆ‘ ಎಂದು 16 ವಯಸ್ಸಿನ ಬಾಲಕಿ ಚೀರುತ್ತಿದ್ದಳು.</p><p>ಇದನ್ನು ಗಮನಿಸಿದ ಸಾರ್ವಜನಿಕರು 112ಗೆ ಕರೆ ಮಾಡಿ ವಿಷಯ ತಿಳಿಸಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಇಲಾಖೆಯವರು ಉಪಾಯ ಮಾಡಿ ಬಾಲಕಿಯನ್ನು ರಕ್ಷಿಸಿದ್ದಾರೆ.</p><p>ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಪಶ್ಚಿಮ ವಿಭಾಗದ ಪೊಲೀಸರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.</p><p>ಸದ್ಯ ಬಾಲಕಿಯನ್ನು ನಿಹ್ಹ್ಯಾನ್ಸ್ನ ಮಾನಸಿಕ ಸಲಹಾ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆತ್ಮಹತ್ಯೆ ಯತ್ನಕ್ಕೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.</p><p>ಆತ್ಮಹತ್ಯೆ ಯತ್ನ ಸಂದರ್ಭದಲ್ಲಿ ಸಂತ್ರಸ್ತರು ಅಥವಾ ಅವರ ಸ್ನೇಹಿತರು, ಸಂಬಂಧಿಗಳು 14416 ಅಥವಾ 1-800-891-4416 24X7 ಉಚಿತ ಸಹಾಯವಾಣಿಯನ್ನು ಸಂಪರ್ಕಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>