ನಗರದ ನಾಲ್ಕು ದಿಕ್ಕಿನಲ್ಲೂ ಉಪನಗರಗಳ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಹೊರ ಭಾಗಗಳನ್ನು ಅಭಿವೃದ್ಧಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಕಷ್ಟಕರವಾಗುತ್ತದೆ. ಶುದ್ಧ ಗಾಳಿ ಸಿಗದಾಗುತ್ತದೆ. ಕಸ, ಒಳಚರಂಡಿ ನಿರ್ವಹಣೆ ಅಸಾಧ್ಯವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.