<p><strong>ಬೆಂಗಳೂರು:</strong> ಬೆಂಗಳೂರು ನಗರ ಜಿಲ್ಲೆಯ ಜನಸಂಖ್ಯೆಯು ಶೇ 48ರಷ್ಟು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ರಾಜಧಾನಿಯಲ್ಲೇ ಶೇ 20ರಷ್ಟು ಮಂದಿನೆಲೆಸುವ ಸಾಧ್ಯತೆ ಕಂಡುಬಂದಿದೆ.</p>.<p>2011ರಲ್ಲಿ ಬೆಂಗಳೂರು ನಗರದಲ್ಲಿ 96.21 ಲಕ್ಷ ಜನಸಂಖ್ಯೆ ಇದ್ದರೆ, 2021ರ ವೇಳೆಗೆ ಈ ಸಂಖ್ಯೆ 1.42 ಕೋಟಿಗೆ ತಲುಪಲಿದೆ ಎಂದು ಆರ್ಥಿಕ ಹಾಗೂ ಅಂಕಿಸಂಖ್ಯೆ ಇಲಾಖೆಯ ನಿರ್ದೇಶನಾಲಯದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.</p>.<p>2011ರಲ್ಲಿ ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಇತ್ತು. ಹಿಂದಿನ ಒಂದು ದಶಕದಲ್ಲಿ ಶೇ 17.77ರಷ್ಟು ಹೆಚ್ಚಳವನ್ನು ದಾಖಲಿಸಿತ್ತು. 2021ರ ವೇಳೆಗೆ ರಾಜ್ಯದ ಜನಸಂಖ್ಯೆ 7.19 ಕೋಟಿಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.</p>.<p>‘ಈಗಿರುವ ಒತ್ತಡವನ್ನೇ ತಡೆದುಕೊಳ್ಳಲುಬೆಂಗಳೂರು ನಗರಕ್ಕೆ ಸಾಧ್ಯವಾಗುತ್ತಿಲ್ಲ. ಜನಸಂಖ್ಯೆಗೆ ಅನುಗು<br />ಣವಾಗಿ ಮೂಲಸೌಕರ್ಯ ಕಲ್ಪಿಸುವುದು ಕಷ್ಟಕರವಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಕಡಿವಾಣ ಹಾಕದಿದ್ದರೆ ಜನಸಂಖ್ಯೆ ನಿಯಂತ್ರಿಸಲು ಸಾಧ್ಯವಾಗದು. ಇದು ಅಪಾಯದ ಮುನ್ಸೂಚನೆ’ಎಂದು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿದರು.</p>.<p>ನಗರದ ನಾಲ್ಕು ದಿಕ್ಕಿನಲ್ಲೂ ಉಪನಗರಗಳ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಹೊರ ಭಾಗಗಳನ್ನು ಅಭಿವೃದ್ಧಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಕಷ್ಟಕರವಾಗುತ್ತದೆ. ಶುದ್ಧ ಗಾಳಿ ಸಿಗದಾಗುತ್ತದೆ. ಕಸ, ಒಳಚರಂಡಿ ನಿರ್ವಹಣೆ ಅಸಾಧ್ಯವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೆಂಗಳೂರು ನಗರ ಜಿಲ್ಲೆಯ ಜನಸಂಖ್ಯೆಯು ಶೇ 48ರಷ್ಟು ಭಾರಿ ಪ್ರಮಾಣದಲ್ಲಿ ಹೆಚ್ಚಳವಾಗುವ ನಿರೀಕ್ಷೆ ಇದ್ದು, ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ರಾಜಧಾನಿಯಲ್ಲೇ ಶೇ 20ರಷ್ಟು ಮಂದಿನೆಲೆಸುವ ಸಾಧ್ಯತೆ ಕಂಡುಬಂದಿದೆ.</p>.<p>2011ರಲ್ಲಿ ಬೆಂಗಳೂರು ನಗರದಲ್ಲಿ 96.21 ಲಕ್ಷ ಜನಸಂಖ್ಯೆ ಇದ್ದರೆ, 2021ರ ವೇಳೆಗೆ ಈ ಸಂಖ್ಯೆ 1.42 ಕೋಟಿಗೆ ತಲುಪಲಿದೆ ಎಂದು ಆರ್ಥಿಕ ಹಾಗೂ ಅಂಕಿಸಂಖ್ಯೆ ಇಲಾಖೆಯ ನಿರ್ದೇಶನಾಲಯದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.</p>.<p>2011ರಲ್ಲಿ ರಾಜ್ಯದ ಒಟ್ಟು ಜನಸಂಖ್ಯೆ 6.10 ಕೋಟಿ ಇತ್ತು. ಹಿಂದಿನ ಒಂದು ದಶಕದಲ್ಲಿ ಶೇ 17.77ರಷ್ಟು ಹೆಚ್ಚಳವನ್ನು ದಾಖಲಿಸಿತ್ತು. 2021ರ ವೇಳೆಗೆ ರಾಜ್ಯದ ಜನಸಂಖ್ಯೆ 7.19 ಕೋಟಿಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.</p>.<p>‘ಈಗಿರುವ ಒತ್ತಡವನ್ನೇ ತಡೆದುಕೊಳ್ಳಲುಬೆಂಗಳೂರು ನಗರಕ್ಕೆ ಸಾಧ್ಯವಾಗುತ್ತಿಲ್ಲ. ಜನಸಂಖ್ಯೆಗೆ ಅನುಗು<br />ಣವಾಗಿ ಮೂಲಸೌಕರ್ಯ ಕಲ್ಪಿಸುವುದು ಕಷ್ಟಕರವಾಗಿದೆ. ಇದು ಆರೋಗ್ಯಕರ ಬೆಳವಣಿಗೆಯಲ್ಲ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಕಡಿವಾಣ ಹಾಕದಿದ್ದರೆ ಜನಸಂಖ್ಯೆ ನಿಯಂತ್ರಿಸಲು ಸಾಧ್ಯವಾಗದು. ಇದು ಅಪಾಯದ ಮುನ್ಸೂಚನೆ’ಎಂದು ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಹೇಳಿದರು.</p>.<p>ನಗರದ ನಾಲ್ಕು ದಿಕ್ಕಿನಲ್ಲೂ ಉಪನಗರಗಳ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಹೊರ ಭಾಗಗಳನ್ನು ಅಭಿವೃದ್ಧಿಪಡಿಸದಿದ್ದರೆ ಮುಂದಿನ ದಿನಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವುದು ಕಷ್ಟಕರವಾಗುತ್ತದೆ. ಶುದ್ಧ ಗಾಳಿ ಸಿಗದಾಗುತ್ತದೆ. ಕಸ, ಒಳಚರಂಡಿ ನಿರ್ವಹಣೆ ಅಸಾಧ್ಯವಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>