<p><strong>ಬೆಂಗಳೂರು: </strong>ಬಿಸಿಲು, ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿಯ ಜನರಿಗೆ ಶನಿವಾರ ಸಂಜೆ ಸುರಿದ ಮಳೆತಂಪೆರೆದಿದೆ.</p>.<p>ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಉಂಟಾಗಿದ್ದು, ಸಂಜೆಯ ವೇಳೆಗೆ ಭಾರಿಗುಡುಗು, ಸಿಡಿಲುಸಹಿತ ಮಳೆ ಸುರಿಯಿತು.</p>.<p>’ಗಾಳಿಯಲ್ಲಿ ಒತ್ತಡ ಕಡಿಮೆಯಾಗಿ ಉಂಟಾಗುವ ಟ್ರಫ್ನಿಂದ ಈಗ ಮಳೆಯಾಗುತ್ತಿದೆ.ಮಾಲ್ಡೀವ್ಸ್ನಿಂದ ತೆಲಂಗಾಣದತ್ತಾ ಗಾಳಿ ಚಲಿಸುತ್ತಿದ್ದು,ಕಳೆದ ಮೂರು ದಿನಗಳಿಂದಲೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್. ಶ್ರೀನಿವಾಸ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಇನ್ನೂ ಎರಡು ದಿನಗಳು ರಾಜಧಾನಿಯಲ್ಲಿ ಗುಡುಗು, ಮಿಂಚು ಸಹಿತ ಮಳೆ ಮುಂದುವರೆಯಲಿದೆ.ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ನಗರದಲ್ಲಿ ಭಾರಿ ಮಳೆ ಸುರಿದೆ. ಬೆಂಗಳೂರಿನ ಕೆಲವು ಕಡೆಗಳಲ್ಲಿ ಸುಮಾರು 50 ಮಿ.ಮೀನಷ್ಟು ಮಳೆಯಾಗಿದೆ ಎಂದರು.</p>.<p>ದಿಢೀರ್ ಮಳೆಯಿಂದ ರಾಜಧಾನಿಯ ಜನರುಪರದಾಡುವಂತಾಯಿತು.ಬೈಕ್ ಸವಾರರು ಟ್ರಾಫಿಕ್ನಲ್ಲಿ ಸಿಲುಕಿ ಒದ್ದಾಡಿದರು. ಎಡೆಬಿಡದೆ ಮಳೆಸುರಿಯುತ್ತಿದ್ದು,ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ.ಬೆಂಗಳೂರು ಸುತ್ತಮುತ್ತಲ ರಾಜ್ಯದಲ್ಲಿಯೂ ಮಳೆಯಾಗಿದೆ.ಕೋಲಾರದ ಕೆಲವೊಂದು ಪ್ರದೇಶದಲ್ಲಿ90 ಮಿ.ಮೀಟರ್ ನಷ್ಟು ಮಳೆ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಸಿಲು, ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿಯ ಜನರಿಗೆ ಶನಿವಾರ ಸಂಜೆ ಸುರಿದ ಮಳೆತಂಪೆರೆದಿದೆ.</p>.<p>ಬೆಳಗ್ಗಿನಿಂದಲೇ ಮೋಡ ಕವಿದ ವಾತಾವರಣ ಉಂಟಾಗಿದ್ದು, ಸಂಜೆಯ ವೇಳೆಗೆ ಭಾರಿಗುಡುಗು, ಸಿಡಿಲುಸಹಿತ ಮಳೆ ಸುರಿಯಿತು.</p>.<p>’ಗಾಳಿಯಲ್ಲಿ ಒತ್ತಡ ಕಡಿಮೆಯಾಗಿ ಉಂಟಾಗುವ ಟ್ರಫ್ನಿಂದ ಈಗ ಮಳೆಯಾಗುತ್ತಿದೆ.ಮಾಲ್ಡೀವ್ಸ್ನಿಂದ ತೆಲಂಗಾಣದತ್ತಾ ಗಾಳಿ ಚಲಿಸುತ್ತಿದ್ದು,ಕಳೆದ ಮೂರು ದಿನಗಳಿಂದಲೂ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದೆ’ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಜಿ.ಎಸ್. ಶ್ರೀನಿವಾಸ ರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಇನ್ನೂ ಎರಡು ದಿನಗಳು ರಾಜಧಾನಿಯಲ್ಲಿ ಗುಡುಗು, ಮಿಂಚು ಸಹಿತ ಮಳೆ ಮುಂದುವರೆಯಲಿದೆ.ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶನಿವಾರ ನಗರದಲ್ಲಿ ಭಾರಿ ಮಳೆ ಸುರಿದೆ. ಬೆಂಗಳೂರಿನ ಕೆಲವು ಕಡೆಗಳಲ್ಲಿ ಸುಮಾರು 50 ಮಿ.ಮೀನಷ್ಟು ಮಳೆಯಾಗಿದೆ ಎಂದರು.</p>.<p>ದಿಢೀರ್ ಮಳೆಯಿಂದ ರಾಜಧಾನಿಯ ಜನರುಪರದಾಡುವಂತಾಯಿತು.ಬೈಕ್ ಸವಾರರು ಟ್ರಾಫಿಕ್ನಲ್ಲಿ ಸಿಲುಕಿ ಒದ್ದಾಡಿದರು. ಎಡೆಬಿಡದೆ ಮಳೆಸುರಿಯುತ್ತಿದ್ದು,ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ.ಬೆಂಗಳೂರು ಸುತ್ತಮುತ್ತಲ ರಾಜ್ಯದಲ್ಲಿಯೂ ಮಳೆಯಾಗಿದೆ.ಕೋಲಾರದ ಕೆಲವೊಂದು ಪ್ರದೇಶದಲ್ಲಿ90 ಮಿ.ಮೀಟರ್ ನಷ್ಟು ಮಳೆ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>