<p><strong>ಬೆಂಗಳೂರು</strong>: ‘ಪಶ್ಚಿಮ ವಲಯದಲ್ಲಿ 1,369 ಮನೆಗಳಿಗೆ ನೀರು ನುಗ್ಗಿ ತೊಂದರೆ ಆಗಿರುವುದನ್ನು ಗುರುತಿಸಲಾಗಿದೆ. ಅವರ ಬ್ಯಾಂಕ್ ಖಾತೆಗೆ ಶೀಘ್ರವೇ ತಲಾ ₹25 ಸಾವಿರ ವರ್ಗಾವಣೆ ಮಾಡಲಾಗುವುದು. ನೀರು ನುಗ್ಗದಿರುವ ಮನೆಯವರಿಗೂ ಪರಿಹಾರ ನೀಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.</p>.<p>ಪಶ್ಚಿಮ ವಲಯದ ಕಾರ್ಯಪಡೆಯ ಮುಖ್ಯಸ್ಥರಾದ ಬಳಿಕ ಬಿಬಿಎಂಪಿ ಕಚೇರಿಯಲ್ಲಿ ಮೊದಲ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.</p>.<p>‘ರೈಲ್ವೆ ಸೇತುವೆಗಳು ಕಿರಿದಾಗಿರುವುದರಿಂದಲೂ ನೀರು ಬಡಾವಣೆಗಳಿಗೆ ನುಗ್ಗುತ್ತಿರುವ ದೂರುಗಳಿವೆ. ಮುಂದಿನ ಸಭೆಗೆ ರೈಲ್ವೆ ಅಧಿಕಾರಿಗಳನ್ನು ಆಹ್ವಾನಿಸುವಂತೆ ಸೂಚಿಸಿದ್ದೇನೆ’ ಎಂದರು.</p>.<p>‘ಪಶ್ಚಿಮ ವಲಯದ ಕಾರ್ಯಪಡೆ 15 ದಿನಗಳಿಗೊಮ್ಮೆ ಸಭೆ ನಡೆಸಲಿದೆ. ವಲಯ ಆಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದ್ದು, ₹1 ಕೋಟಿ ತನಕ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲು ಸ್ಥಳದಲ್ಲೇ ಆದೇಶ ನೀಡುವ ಅಧಿಕಾರ ಕೊಡಲಾಗಿದೆ. ಇದರಿಂದ ಪ್ರವಾಹ ಸಂದರ್ಭದಲ್ಲಿ ಪರಿಹಾರ ಕಾರ್ಯವನ್ನು ವೇಗವಾಗಿ ಕೈಗೊಳ್ಳಲು ಸಾಧ್ಯ’ ಎಂದರು.</p>.<p>ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡುವ ಬೇಜವಾಬ್ದಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಧಿಕಾರವನ್ನೂ ವಲಯ ಆಯುಕ್ತರಿಗೆ ನೀಡಲಾಗಿದೆ ಎಂದು ಹೇಳಿದರು.</p>.<p>‘ಪ್ರಾಥಮಿಕ ಮತ್ತು ಎರಡನೇ ಹಂತದ ಕಾಲುವೆಗಳ ಹೂಳು ತೆಗೆಯುವ ಕೆಲಸವನ್ನು ಆದ್ಯತೆ ಮೇರೆಗೆ ನಿರ್ವಹಿಸಲಾಗುವುದು. ಎಲ್ಲೆಲ್ಲಿ ರಾಜಕಾಲುವೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಪ್ರವಾಹ ಸಾಧ್ಯತೆ ಇರುವ ಸ್ಥಳಗಳನ್ನು ಗುರುತಿಸಿ ಸರಿಪಡಿಸುವ ಕೆಲಸ ಮಾಡಲಾಗುವುದು’ ಎಂದರು.</p>.<p>ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಂಸದ ತೇಜಸ್ವಿಸೂರ್ಯ, ಶಾಸಕ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ತಿನ ಸದಸ್ಯ ಪುಟ್ಟಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಪಶ್ಚಿಮ ವಲಯದಲ್ಲಿ 1,369 ಮನೆಗಳಿಗೆ ನೀರು ನುಗ್ಗಿ ತೊಂದರೆ ಆಗಿರುವುದನ್ನು ಗುರುತಿಸಲಾಗಿದೆ. ಅವರ ಬ್ಯಾಂಕ್ ಖಾತೆಗೆ ಶೀಘ್ರವೇ ತಲಾ ₹25 ಸಾವಿರ ವರ್ಗಾವಣೆ ಮಾಡಲಾಗುವುದು. ನೀರು ನುಗ್ಗದಿರುವ ಮನೆಯವರಿಗೂ ಪರಿಹಾರ ನೀಡಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.</p>.<p>ಪಶ್ಚಿಮ ವಲಯದ ಕಾರ್ಯಪಡೆಯ ಮುಖ್ಯಸ್ಥರಾದ ಬಳಿಕ ಬಿಬಿಎಂಪಿ ಕಚೇರಿಯಲ್ಲಿ ಮೊದಲ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.</p>.<p>‘ರೈಲ್ವೆ ಸೇತುವೆಗಳು ಕಿರಿದಾಗಿರುವುದರಿಂದಲೂ ನೀರು ಬಡಾವಣೆಗಳಿಗೆ ನುಗ್ಗುತ್ತಿರುವ ದೂರುಗಳಿವೆ. ಮುಂದಿನ ಸಭೆಗೆ ರೈಲ್ವೆ ಅಧಿಕಾರಿಗಳನ್ನು ಆಹ್ವಾನಿಸುವಂತೆ ಸೂಚಿಸಿದ್ದೇನೆ’ ಎಂದರು.</p>.<p>‘ಪಶ್ಚಿಮ ವಲಯದ ಕಾರ್ಯಪಡೆ 15 ದಿನಗಳಿಗೊಮ್ಮೆ ಸಭೆ ನಡೆಸಲಿದೆ. ವಲಯ ಆಯುಕ್ತರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದ್ದು, ₹1 ಕೋಟಿ ತನಕ ತುರ್ತು ಕಾಮಗಾರಿ ಕೈಗೆತ್ತಿಕೊಳ್ಳಲು ಸ್ಥಳದಲ್ಲೇ ಆದೇಶ ನೀಡುವ ಅಧಿಕಾರ ಕೊಡಲಾಗಿದೆ. ಇದರಿಂದ ಪ್ರವಾಹ ಸಂದರ್ಭದಲ್ಲಿ ಪರಿಹಾರ ಕಾರ್ಯವನ್ನು ವೇಗವಾಗಿ ಕೈಗೊಳ್ಳಲು ಸಾಧ್ಯ’ ಎಂದರು.</p>.<p>ಅಭಿವೃದ್ಧಿ ಕಾಮಗಾರಿಗಳನ್ನು ವಿಳಂಬ ಮಾಡುವ ಬೇಜವಾಬ್ದಾರಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಧಿಕಾರವನ್ನೂ ವಲಯ ಆಯುಕ್ತರಿಗೆ ನೀಡಲಾಗಿದೆ ಎಂದು ಹೇಳಿದರು.</p>.<p>‘ಪ್ರಾಥಮಿಕ ಮತ್ತು ಎರಡನೇ ಹಂತದ ಕಾಲುವೆಗಳ ಹೂಳು ತೆಗೆಯುವ ಕೆಲಸವನ್ನು ಆದ್ಯತೆ ಮೇರೆಗೆ ನಿರ್ವಹಿಸಲಾಗುವುದು. ಎಲ್ಲೆಲ್ಲಿ ರಾಜಕಾಲುವೆ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ ಪ್ರವಾಹ ಸಾಧ್ಯತೆ ಇರುವ ಸ್ಥಳಗಳನ್ನು ಗುರುತಿಸಿ ಸರಿಪಡಿಸುವ ಕೆಲಸ ಮಾಡಲಾಗುವುದು’ ಎಂದರು.</p>.<p>ಅಬಕಾರಿ ಸಚಿವ ಕೆ.ಗೋಪಾಲಯ್ಯ, ಸಂಸದ ತೇಜಸ್ವಿಸೂರ್ಯ, ಶಾಸಕ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ತಿನ ಸದಸ್ಯ ಪುಟ್ಟಣ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>