ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Bengaluru Rain: ಅಂಡರ್‌ಪಾಸಲ್ಲಿ ಸಿಲುಕಿದ್ದ ಮಹಿಳೆ ಸಾವು: ₹5 ಲಕ್ಷ ಪರಿಹಾರದ ಭರವಸೆ

Published 21 ಮೇ 2023, 12:13 IST
Last Updated 21 ಮೇ 2023, 12:13 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕೆಆರ್‌ ವೃತ್ತದ ಕೆಳಸೇತುವೆಯಲ್ಲಿ ಮಳೆಯಿಂದ ಸಂಗ್ರಹಗೊಂಡಿದ್ದ ನೀರಿನಲ್ಲಿ ಸಿಲುಕಿ ಅಸ್ವಸ್ಥಗೊಂಡಿದ್ದ ಬಾನು ರೇಖಾ (23) ಎಂಬುವರು ಮೃತಪಟ್ಟಿದ್ದಾರೆ.

ಕಾರಿನಲ್ಲಿದ್ದ ಉಳಿದ ಆರು ಮಂದಿ ಪಾರಾಗಿದ್ದಾರೆ. ಕಾರಿನಲ್ಲಿ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು. ವಿಜಯವಾಡದ ಬಾನು ಅವರು ಇನ್ಪೊಸಿಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ಕುಟುಂಬವು ಬೆಂಗಳೂರಿಗೆ ಬಂದಿತ್ತು. ಅವರಿಗೆ ಬೆಂಗಳೂರಿನ ವಿವಿಧ ಸ್ಥಳಗಳನ್ನು ತೋರಿಸಲು ಕಾರಿನಲ್ಲಿ ತೆರಳಿದ್ದರು. ಆಗ ಈ ಅನಾಹುತ ಸಂಭವಿಸಿದೆ.

ಸೇಂಟ್‌ ಮಾರ್ಥಸ್‌ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಮೃತ ಕುಟುಂಬಕ್ಕೆ ₹ 5 ಲಕ್ಷ ಪರಿಹಾರ ನೀಡುವುದಾಗಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT